ರಾಜ್ಯ

ಸಣ್ಣ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ : ಕಟ್ಟುನಿಟ್ಟಿನ ಜಾರಿಗೆ ʼಹೈʼ ನಿರ್ದೇಶನ

ಬೆಂಗಳೂರು : ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು ೨೦೨೨ರ ನಿಯಮ ೧೩೮ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಉಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.

ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಕೆ. ಅರ್ಚನಾ ಭಟ್ ಎಂಬವರು ೨೦೨೩ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿತು.

ಅಲ್ಲದೆ, ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ವಾಸ್ತವವಾಗಿ ಜಾರಿಗೆ ಬಂದಿಲ್ಲ. ಹೀಗಾಗಿ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ತಕ್ಷಣ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೀಠ ಹೇಳಿದೆ.

ಇದನ್ನೂ ಓದಿ:-ಮಡಿಕೇರಿ | ಬೀದಿ ನಾಯಿಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಜಾಗೃತಿ ಮುಂದುವರೆರಿಸಿ
ಮಾರುಕಟ್ಟೆಯಲ್ಲಿ ಸುರಕ್ಷತಾ ಪರಿಕರಗಳ ಲಭ್ಯತೆ ಖಚಿತಪಡಿಸಿಕೊಂಡ ಬಳಿಕ ರಾಜ್ಯದಲ್ಲಿ ನಿಯಮವನ್ನು ಜಾರಿಗೊಳಿಸಲು ಅಧಿಕಾರಿಗಳಿಗೆ ಪೀಠ ೬ ತಿಂಗಳ ಕಾಲಾವಕಾಶವನ್ನು ನೀಡಿತು. ಜೊತೆಗೆ ೯ ತಿಂಗಳಿಂದ ನಾಲ್ಕು ವರ್ಷದೊಳಗಿನ ಮಗುವನ್ನು ಹಿಂಬದಿ ಸವಾರನಾಗಿ ಸಾಗಿಸುವಾಗ ಮೋಟಾರ್ ಸೈಕಲ್ ಸವಾರನು ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಸಂಬಂಧ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮುಂದುವರಿಸಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ಪೀಠ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ತಯಾರಕರಿಂದ ಪಡೆದ ಮಾಹಿತಿಯನ್ನು ಉಲ್ಲೇಖಿಸಿ, ಹೊಸ ಸುರಕ್ಷತಾ ಪರಿಕರಗಳು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಮೊದಲು ಪರೀಕ್ಷೆಗಳಿಗೆ ಒಳಗಾಗಬೇಕಾಗಿದೆ. ಆದ್ದರಿಂದ ಅವುಗಳ ತಯಾರಿಕೆಗೆ ಸಮಯ ಅಗತ್ಯವಿದೆ ಎಂದು ಪೀಠಕ್ಕೆ ತಿಳಿಸಿದರು.

ಹೊಸ ನಿಯಮಗಳು
ಮಕ್ಕಳಿಗಾಗಿ ಸುರಕ್ಷತಾ ಪರಿಕರಗಳನ್ನು ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು, ೨೦೨೨ರ ಸೆಕ್ಷನ್ ೧೩೮(೭)ರ ಮೂಲಕ ಪರಿಚಯಿಸಲಾಗಿದೆ, ಇದನ್ನು ಫೆಬ್ರವರಿ ೧೫, ೨೦೨೨ರಂದು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ ೧೨೯ರ ಅಡಿ ಸೂಚಿಸಲಾಗಿದೆ. ಸುರಕ್ಷತಾ ಸಲಕರಣೆಗಳ ಜೊತೆಗೆ, ನಾಲ್ಕು ವರ್ಷ ವಯಸ್ಸಿನ ಮಗುವನ್ನು ಹಿಂಬದಿ ಸವಾರನಾಗಿ ಸಾಗಿಸುವಾಗ ಮೋಟಾರ್‌ಸೈಕಲ್ ವೇಗವು ಗಂಟೆಗೆ ೪೦ ಕಿ.ಮೀ.ಗಿಂತ ಹೆಚ್ಚಿರಬಾರದು ಎಂದು ಹೊಸ ನಿಯಮಗಳು ತಿಳಿಸಲಿವೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

10 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago