ರಾಜ್ಯ

ಹೇಮಾವತಿ ಕೆನಾಲ್‌ ಕದನ: ಕೆ.ಎನ್‌.ರಾಜಣ್ಣ ಪುತ್ರನಿಗೆ ಶಾಸಕ ರಂಗನಾಥ್‌ ತಿರುಗೇಟು

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ಹೇಮಾವತಿ ಕೆನಾಲ್‌ ವಿಚಾರದಲ್ಲಿ ಶಾಸಕ ರಂಗನಾಥ್‌ ಬೆದರಿಕೆ ಹಾಕುತ್ತಿದ್ದಾರೆ ಎಂಬ ಹೇಳಿಕೆಗೆ ರಂಗನಾಥ್‌ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.‌24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಣಿಗಲ್‌ನಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಚಿವ ಸಂಪುಟದಲ್ಲಿ ನಮ್ಮ ಕ್ಷೇತ್ರಕ್ಕೆ ಸಹಾಯ ಮಾಡೋದಾಗಿ ಹೇಳಿದ್ದಾರೆ. ಆದರೆ ರಾಜೇಂದ್ರ ರಾಜಣ್ಣ ಅವರು ನಾನು ಫೋನ್‌ ಮಾಡಿ ಬೆದರಿಕೆ ಹಾಕುತ್ತೇನೆಂದು ಹೇಳುತ್ತಾರೆ. ಒಬ್ಬ ಮಂತ್ರಿ ಮಗನಿಗೆ ಬೆದರಿಕೆ ಹಾಕೋಕೆ ಆಗುತ್ತಾ? ನಾನೊಬ್ಬ ಸಾಮಾನ್ಯ ರೈತನ ಮಗ ಎಂದು ಟಾಂಗ್‌ ನೀಡಿದ್ದಾರೆ.

ನಾನು ಫೋನ್‌ನಲ್ಲಿ ಮಾತನಾಡಿದರೆ ಅದು ಬೆದರಿಕೆ ಹೇಗೆ ಆಗುತ್ತದೆ? ರಾಜ್ಯದಲ್ಲಿ ನಮ್ಮ ಸರ್ಕಾರವೇ ಬಂದಿದೆ. ಜನ ಪರ ನಾವು ಶಿರಸಾವಹಿಸಿ ಕೆಲಸ ಮಾಡೋಣ ಎಂದಿದ್ದೇನೆ. ನಮ್ಮ ಕ್ಷೇತ್ರದ ಸಹಕಾರ ಸಂಘದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರೇ ಹಲವು ವರ್ಷಗಳಿಂದ ಇದ್ದಾರೆ. ಅದಕ್ಕೆ ನಾನು ಕಾಂಗ್ರೆಸ್‌ ಬೆಂಬಲಿಗರನ್ನು ತರುವ ಪ್ರಯತ್ನ ಮಾಡುತ್ತೇನೆ. ಹೀಗಾಗಿ ಸಹಕಾರ ಸಂಘದಿಂದ ಸಾಲ ನೀಡಿ ಸದನದಲ್ಲಿ ಕೇಳಿದ್ದೇನೆ ಎಂದು ಹೇಳಿದ್ದಾರೆ.

ಸಚಿವ ರಾಜಣ್ಣ ಅವರೊಂದಿಗೆ ನನಗೆ ವೈಮನಸ್ಸು ಇಲ್ಲ, ತುಂಬಾ ಸಲುಗೆಯಿಂದ ಇದ್ದೇನೆ. ಆದರೆ ನನ್ನ ಮೇಲೆ ಯಾಕೆ ಭಿನ್ನಾಭಿಪ್ರಾಯ ಮಾಡುತ್ತಿದ್ದಾರೆಂದು ಗೊತ್ತಿಲ್ಲ. ಬೆದರಿಕೆ ಹಾಕೋ ಗುಣ ಇಲ್ಲ, ಡಿ.ಕೆ.ಶಿವಕುಮಾರ್‌ ಅವರು ಶಾಸಕರಾಗಿ ಹೇಗೆ ನಡೆದುಕೊಳ್ಳಬೇಕೆಂದು ಹೇಳಿ ಕೊಟ್ಟಿದ್ದಾರೆ. ನಾನು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಹಾಗಾಗಿ ನಾನು ಯಾರಿಗೂ ಬೆದರಿಕೆ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

9 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

10 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

10 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

11 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

11 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

12 hours ago