ರಾಜ್ಯ

ಹೇಮಾವತಿ ಕೆನಾಲ್‌ ಕದನ: ಕೆ.ಎನ್‌.ರಾಜಣ್ಣ ಪುತ್ರನಿಗೆ ಶಾಸಕ ರಂಗನಾಥ್‌ ತಿರುಗೇಟು

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ಹೇಮಾವತಿ ಕೆನಾಲ್‌ ವಿಚಾರದಲ್ಲಿ ಶಾಸಕ ರಂಗನಾಥ್‌ ಬೆದರಿಕೆ ಹಾಕುತ್ತಿದ್ದಾರೆ ಎಂಬ ಹೇಳಿಕೆಗೆ ರಂಗನಾಥ್‌ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.‌24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಣಿಗಲ್‌ನಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಚಿವ ಸಂಪುಟದಲ್ಲಿ ನಮ್ಮ ಕ್ಷೇತ್ರಕ್ಕೆ ಸಹಾಯ ಮಾಡೋದಾಗಿ ಹೇಳಿದ್ದಾರೆ. ಆದರೆ ರಾಜೇಂದ್ರ ರಾಜಣ್ಣ ಅವರು ನಾನು ಫೋನ್‌ ಮಾಡಿ ಬೆದರಿಕೆ ಹಾಕುತ್ತೇನೆಂದು ಹೇಳುತ್ತಾರೆ. ಒಬ್ಬ ಮಂತ್ರಿ ಮಗನಿಗೆ ಬೆದರಿಕೆ ಹಾಕೋಕೆ ಆಗುತ್ತಾ? ನಾನೊಬ್ಬ ಸಾಮಾನ್ಯ ರೈತನ ಮಗ ಎಂದು ಟಾಂಗ್‌ ನೀಡಿದ್ದಾರೆ.

ನಾನು ಫೋನ್‌ನಲ್ಲಿ ಮಾತನಾಡಿದರೆ ಅದು ಬೆದರಿಕೆ ಹೇಗೆ ಆಗುತ್ತದೆ? ರಾಜ್ಯದಲ್ಲಿ ನಮ್ಮ ಸರ್ಕಾರವೇ ಬಂದಿದೆ. ಜನ ಪರ ನಾವು ಶಿರಸಾವಹಿಸಿ ಕೆಲಸ ಮಾಡೋಣ ಎಂದಿದ್ದೇನೆ. ನಮ್ಮ ಕ್ಷೇತ್ರದ ಸಹಕಾರ ಸಂಘದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರೇ ಹಲವು ವರ್ಷಗಳಿಂದ ಇದ್ದಾರೆ. ಅದಕ್ಕೆ ನಾನು ಕಾಂಗ್ರೆಸ್‌ ಬೆಂಬಲಿಗರನ್ನು ತರುವ ಪ್ರಯತ್ನ ಮಾಡುತ್ತೇನೆ. ಹೀಗಾಗಿ ಸಹಕಾರ ಸಂಘದಿಂದ ಸಾಲ ನೀಡಿ ಸದನದಲ್ಲಿ ಕೇಳಿದ್ದೇನೆ ಎಂದು ಹೇಳಿದ್ದಾರೆ.

ಸಚಿವ ರಾಜಣ್ಣ ಅವರೊಂದಿಗೆ ನನಗೆ ವೈಮನಸ್ಸು ಇಲ್ಲ, ತುಂಬಾ ಸಲುಗೆಯಿಂದ ಇದ್ದೇನೆ. ಆದರೆ ನನ್ನ ಮೇಲೆ ಯಾಕೆ ಭಿನ್ನಾಭಿಪ್ರಾಯ ಮಾಡುತ್ತಿದ್ದಾರೆಂದು ಗೊತ್ತಿಲ್ಲ. ಬೆದರಿಕೆ ಹಾಕೋ ಗುಣ ಇಲ್ಲ, ಡಿ.ಕೆ.ಶಿವಕುಮಾರ್‌ ಅವರು ಶಾಸಕರಾಗಿ ಹೇಗೆ ನಡೆದುಕೊಳ್ಳಬೇಕೆಂದು ಹೇಳಿ ಕೊಟ್ಟಿದ್ದಾರೆ. ನಾನು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಹಾಗಾಗಿ ನಾನು ಯಾರಿಗೂ ಬೆದರಿಕೆ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

8 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

12 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

13 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

13 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

13 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

14 hours ago