ರಾಜ್ಯ

ಹೇಮಾವತಿ ಕೆನಾಲ್‌ ಕದನ: ಕೆ.ಎನ್‌.ರಾಜಣ್ಣ ಪುತ್ರನಿಗೆ ಶಾಸಕ ರಂಗನಾಥ್‌ ತಿರುಗೇಟು

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ಹೇಮಾವತಿ ಕೆನಾಲ್‌ ವಿಚಾರದಲ್ಲಿ ಶಾಸಕ ರಂಗನಾಥ್‌ ಬೆದರಿಕೆ ಹಾಕುತ್ತಿದ್ದಾರೆ ಎಂಬ ಹೇಳಿಕೆಗೆ ರಂಗನಾಥ್‌ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.‌24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಣಿಗಲ್‌ನಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಚಿವ ಸಂಪುಟದಲ್ಲಿ ನಮ್ಮ ಕ್ಷೇತ್ರಕ್ಕೆ ಸಹಾಯ ಮಾಡೋದಾಗಿ ಹೇಳಿದ್ದಾರೆ. ಆದರೆ ರಾಜೇಂದ್ರ ರಾಜಣ್ಣ ಅವರು ನಾನು ಫೋನ್‌ ಮಾಡಿ ಬೆದರಿಕೆ ಹಾಕುತ್ತೇನೆಂದು ಹೇಳುತ್ತಾರೆ. ಒಬ್ಬ ಮಂತ್ರಿ ಮಗನಿಗೆ ಬೆದರಿಕೆ ಹಾಕೋಕೆ ಆಗುತ್ತಾ? ನಾನೊಬ್ಬ ಸಾಮಾನ್ಯ ರೈತನ ಮಗ ಎಂದು ಟಾಂಗ್‌ ನೀಡಿದ್ದಾರೆ.

ನಾನು ಫೋನ್‌ನಲ್ಲಿ ಮಾತನಾಡಿದರೆ ಅದು ಬೆದರಿಕೆ ಹೇಗೆ ಆಗುತ್ತದೆ? ರಾಜ್ಯದಲ್ಲಿ ನಮ್ಮ ಸರ್ಕಾರವೇ ಬಂದಿದೆ. ಜನ ಪರ ನಾವು ಶಿರಸಾವಹಿಸಿ ಕೆಲಸ ಮಾಡೋಣ ಎಂದಿದ್ದೇನೆ. ನಮ್ಮ ಕ್ಷೇತ್ರದ ಸಹಕಾರ ಸಂಘದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರೇ ಹಲವು ವರ್ಷಗಳಿಂದ ಇದ್ದಾರೆ. ಅದಕ್ಕೆ ನಾನು ಕಾಂಗ್ರೆಸ್‌ ಬೆಂಬಲಿಗರನ್ನು ತರುವ ಪ್ರಯತ್ನ ಮಾಡುತ್ತೇನೆ. ಹೀಗಾಗಿ ಸಹಕಾರ ಸಂಘದಿಂದ ಸಾಲ ನೀಡಿ ಸದನದಲ್ಲಿ ಕೇಳಿದ್ದೇನೆ ಎಂದು ಹೇಳಿದ್ದಾರೆ.

ಸಚಿವ ರಾಜಣ್ಣ ಅವರೊಂದಿಗೆ ನನಗೆ ವೈಮನಸ್ಸು ಇಲ್ಲ, ತುಂಬಾ ಸಲುಗೆಯಿಂದ ಇದ್ದೇನೆ. ಆದರೆ ನನ್ನ ಮೇಲೆ ಯಾಕೆ ಭಿನ್ನಾಭಿಪ್ರಾಯ ಮಾಡುತ್ತಿದ್ದಾರೆಂದು ಗೊತ್ತಿಲ್ಲ. ಬೆದರಿಕೆ ಹಾಕೋ ಗುಣ ಇಲ್ಲ, ಡಿ.ಕೆ.ಶಿವಕುಮಾರ್‌ ಅವರು ಶಾಸಕರಾಗಿ ಹೇಗೆ ನಡೆದುಕೊಳ್ಳಬೇಕೆಂದು ಹೇಳಿ ಕೊಟ್ಟಿದ್ದಾರೆ. ನಾನು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಹಾಗಾಗಿ ನಾನು ಯಾರಿಗೂ ಬೆದರಿಕೆ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

3 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

3 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

3 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

4 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

4 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

4 hours ago