ರಾಜ್ಯ

ಬೇಸಿಗೆಯ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಇಲ್ಲಿವೆ ಟಿಪ್ಸ್‌…

ಬೇಸಿಗೆ ಕಾಲ ಆರಂಭವಾಗಿದ್ದು, ಈ ಅವಧಿಯಲ್ಲಿ ಅತಿಯಾದ ಉಷ್ಣಾಂಶದಿಂದಾಗಿ ನಾನಾ ರೀತಿಯ ಆರೋಗ್ಯ ಸಮಸ್ಯೆ ಸಂಭವಿಸುವ ಸಾಧ್ಯತೆಯಿದೆ. ಅತಿಯಾದ ಉಷ್ಣಾಂಶದಿಂದ ಸಂಭವಿಸಬಹುದಾದ ಅನಾರೋಗ್ಯ ಪರಿಸ್ಥಿತಿಗಳ ತಡೆಗಟ್ಟುವಿಕೆ, ನಿಯಂತ್ರಣ ಮತ್ತು ನಿರ್ವಹಣೆಯನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ಮಾರ್ಗಸೂಚಿಯನ್ನು ಆರೋಗ್ಯ ಇಲಾಖೆ ಹೊರಡಿಸಿದೆ.

ಹೆಚ್ಚು ನೀರು ಕುಡಿಯುವುದು
• ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀರನ್ನು ಆಗಾಗ್ಗೆ ಸೇವಿಸಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ.
• ಪ್ರಯಾಣ ಮಾಡುವ ಸಮಯದಲ್ಲೂ ಕುಡಿಯಲು ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ.
• ಮೌಖಿಕ ಪುನರ್ಜಲೀಕರಣ ದ್ರಾವಣ (Oral Rehydration Solution – ORS), ಹಾಗೂ ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ/ಲಸ್ಸಿ, ಹಣ್ಣಿನ ಜ್ಯೂಸ್ ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
• ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ. ಅನಾನಸ್, ಸೌತೆಕಾಯಿ, ಲೆಟೂಸ್, ಎಳೆನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.

ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು
• ತಿಳಿ ಬಣ್ಣದ, ಅಳಕವಾದ  (loose fitting ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
• ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ದೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ. ಬಿಸಿಲಿನಿಂದ ರಕ್ಷಣೆ ಪಡೆಯುವುದು ಉತ್ತಮ.
• ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.

ಸದಾ ಎಚ್ಚರದಿಂದಿರಿ
ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆದು. ಅದರಂತೆ ಚಟುವಟಿಕೆಗಳನ್ನು ಯೋಚಿಸುವುದು ಉತ್ತಮ. ಹವಾಮಾನದ ಕುರಿತು ಕಾಲಕಾಲಕ್ಕೆ ಮಾಹಿತಿಯನ್ನು Karnataka State Natural Disaster Monitoring https://www.ksndme.org/default.aspx ನಲ್ಲಿ ಮಾಹಿತಿಯನ್ನು ಪಡೆಯಬಹುದು.ಸಾಧ್ಯವಾದಷ್ಟು ಒಳಾಂಗಣದಲ್ಲಿರಿ
• ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ.
• ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು, ಹಗಲು ಹೊತ್ತಿನಲ್ಲ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿಡಿ. ಹಾಗೂ ತಣ್ಣನೆಯ ಗಾಳಿಯ ಸಂಚಾರಕ್ಕೆ ಅನುಕೂಲವಾಗುವಂತೆ, ರಾತ್ರಿಯ ಹೊತ್ತು ಕಿಟಕಿಗಳನ್ನು ತೆರೆಡಿಡಬೇಕು.
ಹೊರಾಂಗಣ ಚಟುವಟಿಕೆಗಳ ಸಂದರ್ಭದಲ್ಲಿ:
ಹೊರಾಂಗಣ ಚಟುವಟಿಕೆಗಳನ್ನು ಆದಷ್ಟೂ ದಿನದ ತಣ್ಣನೆಯ ಸಮಯದಲ್ಲಿ, ಅಂದರೆ ಬೆಳಗಿನ ಹೊತ್ತು ಅಥವಾ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಿ. ಹೊರಾಂಗಣ ಪ್ರದೇಶಗಳಲ್ಲಿ ಆಯೋಜಿಸಲಾಗುವ ಚಟುವಟಿಕೆಗಳು ಪೂರ್ವಾಹ್ನ 11 ಗಂಟೆಯ ಒಳಗೆ ಮುಕ್ತಾಯಗೊಳಿಸುವುದು ಉತ್ತಮ.
ಪೂರ್ವಾಹ್ನ 11 ಗಂಟೆಯಿAದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು / ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ:
• ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್‌ನ ವ್ಯವಸ್ಥೆ ಮಾಡುವುದು
• ಉತ್ತಮ ಗಾಳಿಯ (Air circulation) ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು.
• ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವುದು.ದುರ್ಬಲ ವ್ಯಕ್ತಿಗಳಿಗೆ
ಬಿಸಿ ಗಾಳಿಯ ಒತ್ತಡ ಹಾಗೂ ಬಿಸಿ ಗಾಳಿಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳಿಂದ ಎಲ್ಲರಿಗೂ ಅಪಾಯವಿದೆ. ಆದರೆ ಈ ಕೆಳಕಾಣಿಸಿದ ಗುಂಪಿನ ಜನರಿಗೆ ಹೆಚ್ಚು ಅಪಾಯವಿರುವ ಹಿನ್ನೆಯಲ್ಲಿ ಹೆಚ್ಚುವರಿ ಗಮನವನ್ನು ನೀಡುವುದು ಅಗತ್ಯವಾಗಿದೆ.
• ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು
• ಗರ್ಭಿಣಿಯರು
• ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು
• ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು
• ಆರೋಗ್ಯ ಸಮಸ್ಯೆಗಳಿರುವವರು, ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು.
ತಂಪಾದ ವಾತಾವರಣವಿರುವ ಪ್ರದೇಶದಿಂದ ಬಿಸಿಯಾದ ವಾತಾವರಣದ ಪ್ರದೇಶಕ್ಕೆ ಭೇಟಿ ನೀಡುವ ಜನರು: ಬಿಸಿ ಗಾಳಿಯ ಸಂದರ್ಭದಲ್ಲಿ ಸುಮಾರು ಒಂದು ವಾರದ ಅವಧಿಯನ್ನು ಹೊಸ ವಾತಾವರಣಕ್ಕೆ ಒಗ್ಗಿಕೊಳ್ಳಲು (acclimatized)   ಮೀಸಲಿಡಬೇಕು ಹಾಗೂ ಈ ಅವಧಿಯಲ್ಲಿ ಹೆಚ್ಚು ನೀರನ್ನು ಸೇವಿಸಬೇಕು. ಹಂತ ಹಂತವಾಗಿ ಬಿಸಿಯಾದ ವಾತಾವರಣದಲ್ಲಿ ಚಟುವಟಿಕೆಗಳನ್ನು ನಡೆಸುವುದರಿಂದ ಒಗ್ಗಿಕೊಳ್ಳಲು ಸಾಧ್ಯವಾಗುತ್ತದೆ.ಇತರ ಮುನ್ನೆಚ್ಚರಿಕಾ ಕ್ರಮಗಳು

• ಪ್ರತ್ಯೇಕವಾಗಿ / ಒಂಟಿಯಾಗಿ ವಾಸಿಸುವ ವೃದ್ಧರು ಅಥವಾ ರೋಗಿಗಳ ಉಸ್ತುವಾರಿ ಹಾಗೂ ಅವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ದೈನಂದಿನವಾಗಿ ಕೈಗೊಳ್ಳಬೇಕು.
• ಮನೆಯ ಒಳಾಂಗಣವನ್ನು ತಣ್ಣಗಿರಿಸಲು ಪರದೆಗಳು / ಷಟರ್ ಗಳನ್ನು ಬಳಸಿ ಹಾಗೂ ರಾತ್ರಿಯ ಸಮಯದಲ್ಲಿ ಕಿಟಕಿಗಳನ್ನು ತೆರೆದಿಡಿ.
• ಹಗಲು ಹೊತ್ತಿನಲ್ಲಿ ಮನೆಯ ಕೆಳಗಿನ ಮಹಡಿಗಳಲ್ಲಿರುವುದು ಉತ್ತಮ.
• ಶರೀರವನ್ನು ತಣ್ಣಗಿಡಲು ಫ್ಯಾನ್ ಅಥವಾ ತೇವವಾದ ಬಟ್ಟೆಯನ್ನು ಬಳಸಬಹುದು.

ಇವುಗಳನ್ನು ಮಾಡಬಾರದು
• ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಬೇಕು.
• ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು.
• ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
• ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡುವುದು ತಪ್ಪಿಸಿ, ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
• ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ.
• ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
• ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
• ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ, ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅಪಾಯಕಾರಿಯಾಗಬಹುದು.
ಎಚ್ಚರವಿರಲಿ ಅತಿಯಾದ ಶಾಖದಿಂದ ಈ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು :

• ತಲೆ ಸುತ್ತುವುದು / ಪ್ರಜ್ಞೆ ತಪ್ಪುವುದು
• ವಾಕರಿಕೆ ಅಥವಾ ವಾಂತಿಯಾಗುವುದು
• ಅತಿಯಾದ ಬಾಯಾರಿಕೆ
• ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ
• ತಲೆನೋವು
• ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ.
ಅತಿಯಾದ ಉಷ್ಣತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು
• ಗಮನಿಸಿ – ನಿಮಗೆ ಅಥವಾ ಇಸ್ಮಾಥಿಗಾದರೂ ಅತಿಯಾದ ಉಷ್ಣತೆಯಿಂದ ಮೇಲೆ ತಿಳಿಸಿದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದರೆ.
• ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
• ತಕ್ಷಣವೇ ಸಹಾಯ ಹಾಗೂ ವೈದ್ಯಕೀಯ ನೆರವನ್ನು ಪಡೆಯಿರಿ.
• ದೇಹದ ಉಷ್ಣಾಂಶವನ್ನು ಪರೀಕ್ಷಿಸಿ.
ಮಾಂಸಖAಡಗಳಲ್ಲಿ ನೆಳೆಸವು ಕಂಡು ಬಂದಲ್ಲಿ (ವಿಶೇಷವಾಗಿ ಕಾಲು, ತೋಳು ಅಥವಾ ಹೊಟ್ಟೆಯ ಭಾಗ ಹಲವು ಸಂದರ್ಭಗಳಲ್ಲಿ ಬೇಸಿಗೆಯ ದಿನಗಳಲ್ಲಿ ನಿರಂತರ fold   )
• ತಕ್ಷಣವೇ ತಂಪಾದ ಸ್ಥಳದಲ್ಲಿ ವಿಶ್ರಾಂತಿ ಪಡೆಯಿರಿ ಹಾಗೂ ಹೆಚ್ಚು ಎಲೆಕ್ಟೋಲೈಟ್ ಗಳನ್ನು ಹೊಂದಿದ ಮೌಖಿಕ ಪುನರ್ಜಲೀಕರಣ ದ್ರಾವಣಗಳನ್ನು ಸೇವಿಸಬೇಕು.
• ಅತಿಯಾದ ಉಷ್ಣತೆಯಿಂದ ಉಂಟಾಗುವ ಸ್ನಾಯು ಸೆಳೆತವು ಗಂಟೆಯ ಅವಧಿಯಲ್ಲಿ ಕಮನಗೊಳ್ಳದಿದ್ದರೆ, ವೈದ್ಯಕೀಯ ನೆರವನ್ನು ಪಡೆಯಬೇಕು.ಈ ಕೆಳಗಿನ ಚಿಹ್ನೆಗಳು ಅಪಾಯಕಾರಿಯಾಗಿದ್ದು, ಇವುಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯಕೀಯ ನೆರವನ್ನು ಪಡೆಯಿರಿ.

ವಯಸ್ಕರಲ್ಲಿ
• ಅರೆ ಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ದ್ವಂದ್ವ. ಗಾಬರಿಗೊಳ್ಳುವುದು ಅಥವಾ ಕೋಮಾ ಸ್ಥಿತಿಯನ್ನು ತಲುಮವುದು.
• ಬಿಸಿ ಹಾಗೂ ಕೆಂಪಾದ ಬಗು ಚರ್ಮ
• ದೇಹದ ಉಷ್ಣತೆ ≥40ಲಿಅ ಅಥವಾ 104ಲಿಈ
• ಆತಿಯಾಗಿ ನಡಿಮಿಡಿಯೊಳುವುದು.
• ಕನಿಷ್ಠ ಮೂತ್ರ ವಿಸರ್ಜನೆಯ ಪ್ರಮಾಣ
• ಅತಿಯಾದ  (Throbbing)  ತಲೆನೋವು
• ಬಾಯಿ ಒಣಗುವಿಕೆ ಹಾಗೂ ಗುಳಿ ಬಿದ್ದ ಕಣ್ಣುಗಳು
• ಆತಂಕ, ತಲೆಸುತ್ತುವಿಕೆ ಹಾಗೂ ಪ್ರಜ್ಞೆ ತಪ್ಪುವುದು
• ಮಾಂಸ ಖಂಡಗಳಲ್ಲಿ ಸುಸ್ತು ಅಥವಾ ಸೆಳೆತ
• ಆಲಸ್ಯ / ಅರೆ ಪ್ರಜ್ಞಾವಸ್ಥೆ
• ಮೂರ್ಛೆ ಹೋಗುವುದು
• ವಾಕರಿಕೆ ಮತ್ತು ವಾಂತಿ
• ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ
• ಹೆಚ್ಚಿದ ಹೃದಯದ ಬಡಿತ/ ವೇಗವಾದ ಉಸಿರಾಟ
• ಸಹಾಯಕ್ಕೆ ಕಾಯುತ್ತಿರುವ ಅವಧಿಯಲ್ಲಿ ವ್ಯಕ್ತಿಯ ದೇಹದ ಉಷಾಂಶವನ್ನು ಈ ಕೆಳಕಂಡ ವಿಧಾನದಲ್ಲಿ ಕಡಿಮೆಗೊಳಿಸಿ

ಮಕ್ಕಳಲ್ಲಿ
• ಆಹಾರ ಸೇವಿಸಲು ನಿರಾಕರಿಸುವುದು
• ದೇಹದ ಭಾಗಗಳಿಗೆ ಹಾಗೂ ಬಟ್ಟೆ ಮೇಲೆ ತಣ್ಣಗಿನ ನೀರನ್ನು ಹಾಕುವುದು.
• ಹಾಗೂ ವ್ಯಕ್ತಿಯ ದೇಹದ ಮೇಲೆ ಹೆಚ್ಚು ಗಾಳಿಯನ್ನು ಬೀಸುವುದು
• ಬಾಯಿ ಒಣಗುವಿಕೆ ಹಾಗೂ ಗುಳಿ ಬಿದ್ದ ಕಣ್ಣುಗಳು
• ಆಲಸ್ಯ/ ಅರೆ ಪ್ರಜ್ಞಾವಸ್ಥೆ
• ಮೂರ್ಛೆ ಹೋಗುವುದು
• ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ

ಸಹಾಯಕ್ಕಾಗಿ ಕಾಯುತ್ತಿರುವ ಅವಧಿಯಲ್ಲಿ ವ್ಯಕ್ತಿಯ ದೇಹದ ಉಷ್ಣವನ್ನು ಈ ಕೆಳಕಂಡ ವಿಧಾನದಲ್ಲಿ ಕಡಿಮೆಗೊಳಿಸಿ
• ಸಾಧ್ಯವಿದ್ದಲ್ಲಿ ತಂಪಾದ ಪ್ರದೇಶಕ್ಕೆ ಸ್ಥಳಾಂತರಗೊಳಿಸಿ,
• ದೇಹದ ಭಾಗಗಳಿಗೆ ಹಾಗೂ ಬಟ್ಟೆ ಮೇಲಿನ ತಣ್ಣಗಿನ ನೀರನ್ನು ಹಾಕುವುದು,
• ಹಾಗೂ ವ್ಯಕ್ತಿಯ ದೇಹದ ಮೇಲೆ ಹೆಚ್ಚು ಗಾಳಿಯನ್ನು ಬೀಸುವುದು
• ಯಾರಾದರೂ ಹೆಚ್ಚಿದ ದೇಹದ ಉಷ್ಣಾಂಶ ಹಾಗೂ ಪ್ರಜ್ಞೆ ತುವುದು, ಗೊಂದಲದಲ್ಲಿದ್ದು, ಬೆವರುವಿಕೆಯು ಸ್ಥಗಿತವಾಗಿದ್ದರೆ ತಕ್ಷಣವೇ 108/102 ಗೆ ಕರೆ ಮಾಡಬಹುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

30 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

35 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

37 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

39 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

41 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

12 hours ago