Mysore
20
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ.

ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನವೇ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ತೀವ್ರ ಗೊಂದಲ ಹಾಗೂ ಕುತೂಹಲಗಳ ನಡುವೆಯೇ ಅಧಿವೇಶನಕ್ಕೆ ಬಂದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮೂರೇ ಸಾಲಿನಲ್ಲಿ ಭಾಷಣ ಮುಗಿಸಿ ಅಧಿವೇಶನದಿಂದ ತೆರಳಿದರು.

ರಾಜ್ಯ ಸರ್ಕಾರದ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಕೇವಲ ಮೂರು ಸಾಲುಗಳಲ್ಲಿ ಭಾಷಣ ಮಾಡಿ ನಿರ್ಗಮಿಸಿದರು.

ಸಿಎಂ, ಸ್ಪೀಕರ್‌, ಎಲ್ಲಾ ಸದಸ್ಯರಿಗೆ ಜಂಟಿ ಅಧಿವೇಶನಕ್ಕೆ ಸ್ವಾಗತ, ನನ್ನ ಸರ್ಕಾರ ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ವಿಕಾಸವನ್ನು ನನ್ನ ಸರ್ಕಾರ ಎರಡು ಪಟ್ಟು ಹೆಚ್ಚಿಸಲು ಕಟಿಬದ್ಧವಾಗಿದೆ. ಜೈ ಹಿಂದ್‌, ಜೈ ಕರ್ನಾಟಕ ಎಂದಷ್ಟೇ ಭಾಷಣ ಮಾಡಿ ರಾಜ್ಯಪಾಲರು ನಿರ್ಗಮಿಸಿದರು.

 

Tags:
error: Content is protected !!