ಬೆಂಗಳೂರು: ಕ್ಯಾಂಟೀನ್ಗಳು ಹೈಟೆಕ್ ಸ್ವರ್ಶ ಪಡೆದ ನಂತರ ಗ್ರಾಹಕರಿಗೆ ಮುದ್ದೆ, ಬಸ್ಸಾರು ಭಾಗ್ಯ ದೊರೆಯಲಿದೆ. ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮುದ್ದೆ, ಚಪಾತಿ ಊಟ ನೀಡಲು ತೀರ್ಮಾನಿಸಲಾಗಿದೆ.
ಕ್ಯಾಂಟಿನ್ಗಳಿಗೆ ಬರುವ ಬಹುತೇಕ ಗ್ರಾಹಕರು ಹಿರಿಯ ನಾಗರಿಕರೇ ಆಗಿರುವುದರಿಂದ ಅಂತವರಿಗೆ ಸಕ್ಕರೆ ಕಾಯಿಲೆ ಇರುವುದು ಮಾಮೂಲಾಗಿರುವುದನ್ನುಮನಗಂಡು ಅನ್ನದ ಬದಲಿಗೆ ಮುದ್ದೆ, ಚಪಾತಿ ಭಾಗ್ಯ ಕಲ್ಪಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ವೇಳೆ ಮುದ್ದೆ, ಚಪ್ಪಾತಿ ಊಟದ ವ್ಯವಸ್ಥೆ ಕಲ್ಪಿಸಲು ಅವಕಾಶ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಈಗಾಗಲೇ ಹೊಸ ಟೆಂಡರ್ ಕರೆದಿರುವ ಬಿಬಿಎಂಪಿ ಅಧಿಕಾರಿಗಳು ಇಂದಿರಾ ಕ್ಯಾಂಟಿನ್ಗಳಲ್ಲಿ ಮುದ್ದೆ, ಚಪ್ಪಾತಿ ಊಟದ ಉಲ್ಲೇಖ ಮಾಡಿದ್ದಾರೆ. ಈಗಾಗಿ ಹೊಸ ವರ್ಷದಿಂದ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ, ಬಸಾರು, ಚಪ್ಪಾತಿ ಲಭ್ಯ ಎನ್ನಲಾಗಿದೆ.
ಇದರ ಜತೆಗೆ ಇಂದಿರಾ ಕ್ಯಾಂಟಿನ್ ಗ್ರಾಹಕರ ಸಂಖ್ಯೆಯಲ್ಲಿ ಗೋಲ್ಮಾಲ್ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಬಿಲ್ ಗಳ ಡಿಜಿಟಿಕರಣ ಹಾಗೂ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ.
ನಗರದ ಯಾವುದೇ ಇಂದಿರಾ ಕ್ಯಾಂಟೀನ್ ನಲ್ಲಿ ಗ್ರಾಹಕರು ಊಟ.ತಿಂಡಿ ಕೋಪನ್ ಪಡೆದರೆ ನೇರವಾಗಿ ಕೇಂದ್ರ ಕಛೇರಿಗೆ ಮಾಹಿತಿ ಬರಲಿದೆ ಇದಕ್ಕಾಗಿ ಪ್ರತ್ಯೇಕ ಅಯಪ್ ಅಭಿವೃದ್ಧಿ ಗೂ ಬಿಬಿಎಂಪಿ ಮನಸು ಮಾಡಿದೆ.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…