ರಾಜ್ಯ

ಇಂದಿರಾ ಕ್ಯಾಂಟೀನ್‌ಗೆ ಹೈಟೆಕ್‌ ಟಚ್‌

ಬೆಂಗಳೂರು: ಕ್ಯಾಂಟೀನ್‍ಗಳು ಹೈಟೆಕ್ ಸ್ವರ್ಶ ಪಡೆದ ನಂತರ ಗ್ರಾಹಕರಿಗೆ ಮುದ್ದೆ, ಬಸ್ಸಾರು ಭಾಗ್ಯ ದೊರೆಯಲಿದೆ. ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮುದ್ದೆ, ಚಪಾತಿ ಊಟ ನೀಡಲು ತೀರ್ಮಾನಿಸಲಾಗಿದೆ.

ಕ್ಯಾಂಟಿನ್‍ಗಳಿಗೆ ಬರುವ ಬಹುತೇಕ ಗ್ರಾಹಕರು ಹಿರಿಯ ನಾಗರಿಕರೇ ಆಗಿರುವುದರಿಂದ ಅಂತವರಿಗೆ ಸಕ್ಕರೆ ಕಾಯಿಲೆ ಇರುವುದು ಮಾಮೂಲಾಗಿರುವುದನ್ನುಮನಗಂಡು ಅನ್ನದ ಬದಲಿಗೆ ಮುದ್ದೆ, ಚಪಾತಿ ಭಾಗ್ಯ ಕಲ್ಪಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ವೇಳೆ ಮುದ್ದೆ, ಚಪ್ಪಾತಿ ಊಟದ ವ್ಯವಸ್ಥೆ ಕಲ್ಪಿಸಲು ಅವಕಾಶ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಈಗಾಗಲೇ ಹೊಸ ಟೆಂಡರ್ ಕರೆದಿರುವ ಬಿಬಿಎಂಪಿ ಅಧಿಕಾರಿಗಳು ಇಂದಿರಾ ಕ್ಯಾಂಟಿನ್‍ಗಳಲ್ಲಿ ಮುದ್ದೆ, ಚಪ್ಪಾತಿ ಊಟದ ಉಲ್ಲೇಖ ಮಾಡಿದ್ದಾರೆ. ಈಗಾಗಿ ಹೊಸ ವರ್ಷದಿಂದ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ, ಬಸಾರು, ಚಪ್ಪಾತಿ ಲಭ್ಯ ಎನ್ನಲಾಗಿದೆ.

ಇದರ ಜತೆಗೆ ಇಂದಿರಾ ಕ್ಯಾಂಟಿನ್ ಗ್ರಾಹಕರ ಸಂಖ್ಯೆಯಲ್ಲಿ ಗೋಲ್‍ಮಾಲ್ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಬಿಲ್ ಗಳ ಡಿಜಿಟಿಕರಣ ಹಾಗೂ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ.

ನಗರದ ಯಾವುದೇ ಇಂದಿರಾ ಕ್ಯಾಂಟೀನ್ ನಲ್ಲಿ ಗ್ರಾಹಕರು ಊಟ.ತಿಂಡಿ ಕೋಪನ್ ಪಡೆದರೆ ನೇರವಾಗಿ ಕೇಂದ್ರ ಕಛೇರಿಗೆ ಮಾಹಿತಿ ಬರಲಿದೆ ಇದಕ್ಕಾಗಿ ಪ್ರತ್ಯೇಕ ಅಯಪ್ ಅಭಿವೃದ್ಧಿ ಗೂ ಬಿಬಿಎಂಪಿ ಮನಸು ಮಾಡಿದೆ.

 

andolanait

Recent Posts

ಬಸವತತ್ವ ಪ್ರಸಾರ, ಪ್ರಚಾರ ಇಂದಿನ ಅಗತ್ಯ: ಸಚಿವ ಈಶ್ವರ್ ಖಂಡ್ರೆ‌

ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು…

17 mins ago

ಮದ್ದೂರು: ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ…

1 hour ago

ಉಪಚುನಾವಣೆ ಸಿಎಂಗೆ ಕಬ್ಬಿಣದ ಕಡಲೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

2 hours ago

ಇಟಲಿ ಬಳಿ ಘೋರ ದುರಂತ: ಸಮುದ್ರದಲ್ಲಿ ದೋಣಿ ಮುಳುಗಿ 71 ಜನ ನಾಪತ್ತೆ

ರೋಮ್:‌ ಇಟಲಿ ಕರಾವಳಿಯಲ್ಲಿ ಭೀಕರ ಬೋಟ್‌ ದುರಂತ ಸಂಭವಿಸಿದ್ದು, ಮೆಡಿಟೇರಿಯನ್‌ ಸಮುದ್ರದಲ್ಲಿ ಬೋಟ್‌ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್‌…

2 hours ago

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌…

2 hours ago

ಇನ್ನೂ ಎರಡು ವರ್ಷ ಸಿದ್ದರಾಮಯ್ಯನವರೇ ಸಿಎಂ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ…

2 hours ago