ಬೆಂಗಳೂರು: ಕ್ಯಾಂಟೀನ್ಗಳು ಹೈಟೆಕ್ ಸ್ವರ್ಶ ಪಡೆದ ನಂತರ ಗ್ರಾಹಕರಿಗೆ ಮುದ್ದೆ, ಬಸ್ಸಾರು ಭಾಗ್ಯ ದೊರೆಯಲಿದೆ. ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮುದ್ದೆ, ಚಪಾತಿ ಊಟ ನೀಡಲು ತೀರ್ಮಾನಿಸಲಾಗಿದೆ.
ಕ್ಯಾಂಟಿನ್ಗಳಿಗೆ ಬರುವ ಬಹುತೇಕ ಗ್ರಾಹಕರು ಹಿರಿಯ ನಾಗರಿಕರೇ ಆಗಿರುವುದರಿಂದ ಅಂತವರಿಗೆ ಸಕ್ಕರೆ ಕಾಯಿಲೆ ಇರುವುದು ಮಾಮೂಲಾಗಿರುವುದನ್ನುಮನಗಂಡು ಅನ್ನದ ಬದಲಿಗೆ ಮುದ್ದೆ, ಚಪಾತಿ ಭಾಗ್ಯ ಕಲ್ಪಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ವೇಳೆ ಮುದ್ದೆ, ಚಪ್ಪಾತಿ ಊಟದ ವ್ಯವಸ್ಥೆ ಕಲ್ಪಿಸಲು ಅವಕಾಶ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಈಗಾಗಲೇ ಹೊಸ ಟೆಂಡರ್ ಕರೆದಿರುವ ಬಿಬಿಎಂಪಿ ಅಧಿಕಾರಿಗಳು ಇಂದಿರಾ ಕ್ಯಾಂಟಿನ್ಗಳಲ್ಲಿ ಮುದ್ದೆ, ಚಪ್ಪಾತಿ ಊಟದ ಉಲ್ಲೇಖ ಮಾಡಿದ್ದಾರೆ. ಈಗಾಗಿ ಹೊಸ ವರ್ಷದಿಂದ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ, ಬಸಾರು, ಚಪ್ಪಾತಿ ಲಭ್ಯ ಎನ್ನಲಾಗಿದೆ.
ಇದರ ಜತೆಗೆ ಇಂದಿರಾ ಕ್ಯಾಂಟಿನ್ ಗ್ರಾಹಕರ ಸಂಖ್ಯೆಯಲ್ಲಿ ಗೋಲ್ಮಾಲ್ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಬಿಲ್ ಗಳ ಡಿಜಿಟಿಕರಣ ಹಾಗೂ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ.
ನಗರದ ಯಾವುದೇ ಇಂದಿರಾ ಕ್ಯಾಂಟೀನ್ ನಲ್ಲಿ ಗ್ರಾಹಕರು ಊಟ.ತಿಂಡಿ ಕೋಪನ್ ಪಡೆದರೆ ನೇರವಾಗಿ ಕೇಂದ್ರ ಕಛೇರಿಗೆ ಮಾಹಿತಿ ಬರಲಿದೆ ಇದಕ್ಕಾಗಿ ಪ್ರತ್ಯೇಕ ಅಯಪ್ ಅಭಿವೃದ್ಧಿ ಗೂ ಬಿಬಿಎಂಪಿ ಮನಸು ಮಾಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…