ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೇನಿಲ್ಲ. ಹೈಕಮಾಂಡ್ ಸಿಎಂ ಅವರ ಬೆಂಬಲಕ್ಕೆ ನಿಂತಿದೆ. ನಮ್ಮ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಪ್ರಶ್ನೆ ಎಲ್ಲಿಂದ ಬಂತು? ಬಿಜೆಪಿ-ಜೆಡಿಎಸ್ ಷಡ್ಯಂತ್ರ ಮುಗಿಸಲು ನಾವು ಒಗ್ಗಟ್ಟಾಗಿ ನಿಂತಿದ್ದೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ಹೇಳಿದರು.
ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಯಾವುದೇ ಹುರುಳಿಲ್ಲ. ಈ ಬಗ್ಗೆ ಸಾಕಷ್ಟು ಕಾನೂನು ತಜ್ಞರು ಇದನ್ನೇ ಹೇಳಿದ್ದಾರೆ ಎಂದು ತಿಳಿಸಿದರು.
ಇನ್ನು ಈ ಪ್ರಕರಣ ಸಂಬಂಧ ಹೈಕಮಾಂಡ್ಗೆ ಸಿಎಂ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಿವಿರವಾಗಿ ವಿವರಿಸಿದ್ದಾರೆ. ಬಿಜೆಪಿ-ಜೆಡಿಎಸ್ ಅವರ ರಾಜಭವನದ ಹುನ್ನಾರ ಹೈಕಮಾಂಡ್ಗೆ ತಿಳಿದಿದೆ. ಹಾಗೂ ಅವರ ವಿರುದ್ಧದ ಹೋರಾಟಕ್ಕೆ ಹಿಂಜರಿಯದಂತೆ ನಮಗೆ ಕರೆ ನೀಡಿದ್ದಾರೆ ಎಂದರು.
ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿ. ಸಂವಿಧಾನದ ಮೇಲೆ ಕೆಲಸ ಮಾಡಬೇಕು. ಅದು ಬಿಟ್ಟು ಎಚ್ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನಾ ರೆಡ್ಡಿ ಹಾಗೂ ನಿರಾಣಿ ಅವರ ಕೇಸ್ಗಲು ಇನ್ನೂ ಬಾಕಿ ಇದೆ. ಅದು ಬಿಟ್ಟು ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬೆಳಿಗ್ಗೆ ದೂರು ಪಡೆದು ಸಂಜೆ ನೋಟಿಸ್ ಹೊರಡಿಸಿದ್ದಾರೆ. ಇದನ್ನ ನೋಡಿದರೇ ಗೊತ್ತಾಗುತ್ತದೆ ಎಂದು ಕಿಡಿಕಾರಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…