CM Siddaramaiah
ಬೆಂಗಳೂರು: ಮಹತ್ವದ ಬೆಳವಣೆಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದು, ರಾಜಕೀಯವಾಗಿ ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಭಾರೀ ಪ್ರಮಾಣದ ಆಂತರಿಕ ಜಿದ್ದಾಜಿದ್ದಿ ನಡೆಯುತ್ತಿದೆ. ಜೊತೆಗೆ ವಿಧಾನಪರಿಷತ್ ಸದಸ್ಯರ ನೇಮಕಾತಿ ಕುರಿತಂತೆಯೂ ಹೈಕಮಾಂಡ್ ಜೊತೆಗೆ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಡಿ.ಕೆ..ಶಿವಕುಮಾರ್ ದೆಹಲಿಯಲ್ಲಿದ್ದು, ಹೈಕಮಾಂಡ್ ನಾಯಕರ ಜೊತೆ ಚರ್ಚಿಸುವ ಸಾಧ್ಯತೆಗಳಿವೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಕೂಡ ದೆಹಲಿಗೆ ಭೇಟಿ ನೀಡುತ್ತಿದ್ದು, ರಾಜ್ಯ ರಾಜಕೀಯ ಜಿದ್ದಾಜಿದ್ದಿ ದೆಹಲಿಯ ಅಂಗಳದಲ್ಲಿ ಇತ್ಯರ್ಥವಾಗಲಿದೆಯೇ ಎಂಬ ಕುತೂಹಲ ಹೆಚ್ಚಾಗಿದೆ.
ರಾಜ್ಯದಲ್ಲಿ ಸಂಪುಟ ಪುನಃರಚನೆ ಚರ್ಚೆಗಳು ನಡೆಯುತ್ತಿದೆ. ಈ ಬಗ್ಗೆ ಸ್ವತಃ ಡಿಕೆಶಿ ಸುಳಿವನ್ನೂ ನೀಡಿದ್ದಾರೆ. ಕೆಲವು ಸಚಿವರು ತ್ಯಾಗ ಮಾಡಬೇಕಾದ ಸಂದರ್ಭ ಬರಬಹುದು ಎಂಬ ಅರ್ಥದಲ್ಲೂ ಹೇಳಿಕೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿ ಭೇಟಿಯ ಸಂದರ್ಭದಲ್ಲಿ ವರಿಷ್ಠರಿಗೆ ಈ ವಿಚಾರವನ್ನು ಗಮನಕ್ಕೆ ತರುವ ಸಾಧ್ಯತೆ ಇದೆ.
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…