CM Siddaramaiah
ಬೆಂಗಳೂರು: ಮಹತ್ವದ ಬೆಳವಣೆಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದು, ರಾಜಕೀಯವಾಗಿ ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಭಾರೀ ಪ್ರಮಾಣದ ಆಂತರಿಕ ಜಿದ್ದಾಜಿದ್ದಿ ನಡೆಯುತ್ತಿದೆ. ಜೊತೆಗೆ ವಿಧಾನಪರಿಷತ್ ಸದಸ್ಯರ ನೇಮಕಾತಿ ಕುರಿತಂತೆಯೂ ಹೈಕಮಾಂಡ್ ಜೊತೆಗೆ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಡಿ.ಕೆ..ಶಿವಕುಮಾರ್ ದೆಹಲಿಯಲ್ಲಿದ್ದು, ಹೈಕಮಾಂಡ್ ನಾಯಕರ ಜೊತೆ ಚರ್ಚಿಸುವ ಸಾಧ್ಯತೆಗಳಿವೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಕೂಡ ದೆಹಲಿಗೆ ಭೇಟಿ ನೀಡುತ್ತಿದ್ದು, ರಾಜ್ಯ ರಾಜಕೀಯ ಜಿದ್ದಾಜಿದ್ದಿ ದೆಹಲಿಯ ಅಂಗಳದಲ್ಲಿ ಇತ್ಯರ್ಥವಾಗಲಿದೆಯೇ ಎಂಬ ಕುತೂಹಲ ಹೆಚ್ಚಾಗಿದೆ.
ರಾಜ್ಯದಲ್ಲಿ ಸಂಪುಟ ಪುನಃರಚನೆ ಚರ್ಚೆಗಳು ನಡೆಯುತ್ತಿದೆ. ಈ ಬಗ್ಗೆ ಸ್ವತಃ ಡಿಕೆಶಿ ಸುಳಿವನ್ನೂ ನೀಡಿದ್ದಾರೆ. ಕೆಲವು ಸಚಿವರು ತ್ಯಾಗ ಮಾಡಬೇಕಾದ ಸಂದರ್ಭ ಬರಬಹುದು ಎಂಬ ಅರ್ಥದಲ್ಲೂ ಹೇಳಿಕೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿ ಭೇಟಿಯ ಸಂದರ್ಭದಲ್ಲಿ ವರಿಷ್ಠರಿಗೆ ಈ ವಿಚಾರವನ್ನು ಗಮನಕ್ಕೆ ತರುವ ಸಾಧ್ಯತೆ ಇದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…