ರಾಜ್ಯ

ಹೈಕಮಾಂಡ್‌ ನನ್ನ ಪರವಾಗಿದೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಎರಡುವರೆ ವರ್ಷಗಳಿಗೆ ಮಾತ್ರ ಮುಖ್ಯಮಂತ್ರಿ ಹುದ್ದೆ ಎಂದು ತೀರ್ಮಾನವಾಗಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು ತೀರ್ಮಾನ ಮಾಡಿದರೆ ಮುಂದೆಯೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಹೈಕಮಾಂಡ್ ನನ್ನ ಪರವಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳುವ ಮೂಲಕ ಪ್ರಸ್ತುತ ರಾಜಕೀಯ ಬೆಳವಣಿಗೆಗಳಲ್ಲಿ ಮಹತ್ವದ ಸಂದೇಶ ರವಾನಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಪ್ರದೇಶಗಳ ಅಭಿವೃದ್ಧಿಯ ಕುರಿತ ಚರ್ಚೆಗೆ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಉತ್ತರ ನೀಡುವಾಗ ಕರ್ಮ ಸಿದ್ಧಾಂತದ ಬಗ್ಗೆ ಪ್ರಸ್ತಾಪ ಮಾಡಿದರು.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಧ್ಯ ಪ್ರವೇಶಿಸಿ, ನಾವೆಲ್ಲಾ ಬ್ರಹ್ಮನ ಬಳಿ ಹೆಚ್ಚು ಹೊತ್ತು ಇರದೇ ಬಂದು ಬಿಟ್ಟಿದ್ದೇವೆ. ಆದರೆ ಸಿದ್ದರಾಮಯ್ಯ ಅವರು ಬ್ರಹ್ಮನ ಬಳಿ ಕುಳಿತುಕೊಂಡು 2013 ರಿಂದ 2018 ರವರೆಗೂ 5 ವರ್ಷ ಮುಖ್ಯಮಂತ್ರಿ ಎಂದು ಖಚಿತವಾಗಿ ಬರೆಸಿಕೊಂಡು ಬಂದಿದ್ದರು. ಈಗ ಎರಡೂವರೆ ವರ್ಷ ಮಾತ್ರ ಎಂದು ಬರೆಯಲಾಗಿದೆ ಎಂದು ಕೆಣಕಿದರು.

ಇದು ನಿಮಗೆ ಹೇಗೆ ಗೊತ್ತು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದಾಗ, ನೀವು ಅಧಿಕಾರ ಹಂಚಿಕೆಗೆ ಕುರಿತಂತೆ ಹೊಸದಿಲ್ಲಿ ವಿಮಾನ ಹತ್ತುವಾಗಿನಿಂದಲೂ ಹಿಡಿದು ತೀರ್ಮಾನವಾಗುವವರೆಗೂ ಪ್ರತಿ ಎರಡು ಗಂಟೆಗೆ ಒಮ್ಮೆ ನನಗೆ ಫೋನ್ ಕರೆಯ ಮೂಲಕ ಮಾಹಿತಿ ಬರುತ್ತಿತ್ತು. ನಿಮಗೆ ಎರಡೂವರೆ ವರ್ಷ ಎಂದು ಗಡುವು ಬರೆದಿದ್ದಾರೆ. ಅದನ್ನು ಸರಿ ಮಾಡಿಕೊಳ್ಳಿ ಎಂದು ಹೇಳಿದರು.

ಇದನ್ನು ಓದಿ: ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಇದಕ್ಕೆ ಪ್ರತಿಕ್ರಿಸಿದ ಸಿದ್ದರಾಮಯ್ಯ ನಮ್ಮದು ಹೈಕಮಾಂಡ್ ಪಾರ್ಟಿ. ಮೊದಲ ಅವಧಿಗೆ ೫ ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಪೂರೈಸಿದ್ದೇನೆ. ಈಗ ಹೈಕಮಾಂಡ್ ನನ್ನ ಪರವಾಗಿದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು. ಇಷ್ಟೆಲ್ಲಾ ಸಮಸ್ಯೆಗಳ ನಡುವೆಯೂ ನಿಮ್ಮ ಸಮರ್ಥನೆಯನ್ನು ಮೆಚ್ಚಬೇಕು ಎಂದು ಬಿಜೆಪಿಯ ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್ ಮತ್ತಿತರರು ಕಟಕಿಯಾಡಿದರು.

ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದೇಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಅಶೋಕ್ ಅವರಿಗೆ ವಿರೋಧ ಪಕ್ಷದ ನಾಯಕನಾಗಿ ಐದು ವರ್ಷ ಪೂರ್ಣಗೊಳಿಸುವ ವಿಶ್ವಾಸ ಇದೆಯೇ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು. ನಮಲ್ಲಿ ಅಶೋಕ್ ಐದು ವರ್ಷ ವಿರೋಧ ಪಕ್ಷದ ನಾಯಕರಾಗಿ ಇರುತ್ತಾರೆ. ನಮಗೆ ಆ ಬಗ್ಗೆ ಖಚಿತತೆ ಇದೆ. ನೀವು ಐದು ವರ್ಷ ಮುಖ್ಯಮಂತ್ರಿ ಆಗಿರುವ ವಿಶ್ವಾಸ ಇದೆಯೇ ಎಂದು ಸುನಿಲ್ ಕುಮಾರ್ ಪ್ರತಿ ಸವಾಲು ಹಾಕಿದರು.

ಸಚಿವ ಕೆ.ಜೆ.ಜಾರ್ಜ್, ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೆ ಏಕೆ ಎಂದು ತರಾಟೆಗೆ ತೆಗೆದುಕೊಂಡರು. ಹಿರಿಯ ಶಾಸಕ ಆರ್.ವಿ.ದೇಶಪಾಂಡೆ, ಎರಡೂವರೆ ವರ್ಷ ಅಧಿಕಾರ ಹಂಚಿಕೆಯೆಂದು ತೀರ್ಮಾನವಾಗಿಲ್ಲ ಅನವಶ್ಯಕವಾದ ಚರ್ಚೆ ಬೇಡ ಎಂದರು. ಪದೇ ಪದೇ ವಿರೋಧ ಪಕ್ಷಗಳ ಮೂದಲಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈಗ ನಾನೇ ಮುಖ್ಯಮಂತ್ರಿ. ಮುಂದೆಯೂ ನಾನೇ ಇರುತ್ತೇನೆ ಎಂದು ದೃಢವಾಗಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

3 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago