ಬೆಂಗಳೂರು: ಶಾಸಕರು ದೆಹಲಿಗೆ ಹೋಗಿ ತಮ್ಮ ಅಭಿಪ್ರಾಯ ಹೇಳಲು ಸ್ವತಂತ್ರರಿದ್ದಾರೆ. ಆದರೆ ಹೈಕಮಂಡ್ ಸೂಕ್ತ ನಿರ್ಧಾರ ತೆಗೆದುಕೊಂಡು ರಾಜಕೀಯ ಗೊಂದಲಗಳಿಗೆ ಕೊನೆ ಆಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಸ್ವಾತಂತ್ರ್ಯ ಇದೆ. ಅವರು ಏನು ಅಭಿಪ್ರಾಯ ನೀಡುತ್ತಾರೆ ಎಂದು ನೋಡುತ್ತೇವೆ. ಶಾಸಕರಿಗೆ ಏನು ಹೇಳಬೇಕೆಂದಿದೆಯೋ ಅದನ್ನು ಹೇಳಲಿ. ಅಂತಿಮವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು. ಪಕ್ಷದ ವರಿಷ್ಠರು ಹೇಳಿದಂತೆ ನಾವು ಕೇಳುತ್ತೇವೆ ಎಂದರು.
ಇದನ್ನು ಓದಿ: ರಾಜ್ಯ ಕಾಂಗ್ರೆಸ್ನಲ್ಲಿ ನಂಬರ್ ಗೇಮ್ ನಡೆಯುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಹೈಕಮಾಂಡ್ ಈ ಎಲ್ಲಾ ಗೊಂದಲಗಳಿಗೆ ಪೂರ್ಣ ವಿರಾಮ ನೀಡುವುದು ಅಗತ್ಯ ಎಂದು ಪ್ರತಿಪಾದಿಸಿದರು. ಸಚಿವ ಸಂಪುಟ ಪುನರ್ರಚನೆಯೂ ಕೂಡ ಹೈಕಮಾಂಡ್ ಅನುಮತಿಸಿದ ಬಳಿಕವೇ ನಡೆಯಲಿದೆ. ಮತ್ತೊಮ್ಮೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ತಾವು ಭೇಟಿ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…