ಬೆಂಗಳೂರು: ಶಾಸಕರು ದೆಹಲಿಗೆ ಹೋಗಿ ತಮ್ಮ ಅಭಿಪ್ರಾಯ ಹೇಳಲು ಸ್ವತಂತ್ರರಿದ್ದಾರೆ. ಆದರೆ ಹೈಕಮಂಡ್ ಸೂಕ್ತ ನಿರ್ಧಾರ ತೆಗೆದುಕೊಂಡು ರಾಜಕೀಯ ಗೊಂದಲಗಳಿಗೆ ಕೊನೆ ಆಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಸ್ವಾತಂತ್ರ್ಯ ಇದೆ. ಅವರು ಏನು ಅಭಿಪ್ರಾಯ ನೀಡುತ್ತಾರೆ ಎಂದು ನೋಡುತ್ತೇವೆ. ಶಾಸಕರಿಗೆ ಏನು ಹೇಳಬೇಕೆಂದಿದೆಯೋ ಅದನ್ನು ಹೇಳಲಿ. ಅಂತಿಮವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು. ಪಕ್ಷದ ವರಿಷ್ಠರು ಹೇಳಿದಂತೆ ನಾವು ಕೇಳುತ್ತೇವೆ ಎಂದರು.
ಇದನ್ನು ಓದಿ: ರಾಜ್ಯ ಕಾಂಗ್ರೆಸ್ನಲ್ಲಿ ನಂಬರ್ ಗೇಮ್ ನಡೆಯುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಹೈಕಮಾಂಡ್ ಈ ಎಲ್ಲಾ ಗೊಂದಲಗಳಿಗೆ ಪೂರ್ಣ ವಿರಾಮ ನೀಡುವುದು ಅಗತ್ಯ ಎಂದು ಪ್ರತಿಪಾದಿಸಿದರು. ಸಚಿವ ಸಂಪುಟ ಪುನರ್ರಚನೆಯೂ ಕೂಡ ಹೈಕಮಾಂಡ್ ಅನುಮತಿಸಿದ ಬಳಿಕವೇ ನಡೆಯಲಿದೆ. ಮತ್ತೊಮ್ಮೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ತಾವು ಭೇಟಿ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…