ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ 2015-16ನೇ ಸಾಲಿನ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ 17 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ಸೆಷನ್ ಕೋರ್ಟ್ ಆದೇಶ ಹೊರಡಿಸಿದೆ.
2016ರ ಮಾರ್ಚ್ 21ರಂದು ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪರೀಕ್ಷೆ ನಡೆದಿತ್ತು. ಆದರೆ ಪರೀಕ್ಷೆ ಆರಂಭವಾಗುವ ಮುನ್ನವೇ ಬೆಳಗ್ಗೆ 7.30ಕ್ಕೆ ವಾಟ್ಸಪ್ನಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡಿತ್ತು. ಹೀಗೆ ಪ್ರಶ್ನೆ ಪತ್ರಿಕೆ ವೈರಲ್ ಆದ ಬೆನ್ನಲ್ಲೇ ಬೆಂಗಳೂರಿನ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.
ಇದರ ತನಿಖೆ ಮಾಡಿದ್ದ ಸಿಐಡಿ ಒಟ್ಟು 18 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿತ್ತು. ಈ ಪೈಕಿ ಓರ್ವ ಆರೋಪಿ ವಿಚಾರಣಾ ಹಂತದಲ್ಲಿಯೇ ಮೃತಪಟ್ಟಿದ್ದ. ಇನ್ನುಳಿದ 17 ಆರೋಪಿಗಳನ್ನು ಇಂದು ( ಏಪ್ರಿಲ್ 25 ) ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ಪರ ವಕೀಲ ಆರ್.ಪಿ. ಚಂದ್ರಶೇಖರ್ ವಾದ ಮಂಡಿಸಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…
ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ನಲ್ಲಿ…