ರಾಜ್ಯ

ಬ್ಯಾಂಕ್‌ಗಳ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ ವಿಜಯ್ ಮಲ್ಯ

ಬೆಂಗಳೂರು: ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್‌ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದು, ಈ ಸಂಬಂಧ ಇಂದು ಮಲ್ಯ ಪರ ವಕೀಲ ಸಜನ್‌ ಪೂವಯ್ಯ ವಾದ ಮಂಡಿಸಿದರು. ಈ ಸಂಬಂಧ ಕೋರ್ಟ್‌, ಬ್ಯಾಂಕುಗಳಿಗೆ ನೋಟಿಸ್‌ ಜಾರಿ ಮಾಡಿದೆ.

6200 ಕೋಟಿ ರೂಪಾಯಿ ಸಾಲ ಕೊಡಬೇಕಿತು. ಅದರಲ್ಲಿ 14,000 ಕೋಟಿ ರೂ ವಸೂಲಾಗಿದೆ. ಹೀಗೆಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ರೂ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ವಕೀಲ ಸಜನ್‌ ಪೂವಯ್ಯ ಮನವಿ ಮಾಡಿದರು.

ಇನ್ನು ವಿಜಯ್‌ ಮಲ್ಯ ಪರ ವಕೀಲ ಸಜನ್‌ ಪೂವಯ್ಯ ಅವರ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಆರ್.‌ದೇವದಾಸ್‌ ಅವರಿದ್ದ ಪೀಠ, ಬ್ಯಾಂಕ್‌ಗಳು ಹಾಗೂ ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿದ ಮುಂದಿನ ವಿಚಾರಣೆಯನ್ನು ಫೆಬ್ರವರಿ.19ಕ್ಕೆ ಮುಂದೂಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿರುಗಾಳಿ ಸಹಿತ ಭಾರಿ ಮಳೆ : ಧರೆಗುರುಳಿದ ತೆಂಗಿನ ಮರಗಳು.

ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…

14 mins ago

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

2 hours ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

12 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

15 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

15 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

16 hours ago