ಬೆಂಗಳೂರು: ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದು, ಈ ಸಂಬಂಧ ಇಂದು ಮಲ್ಯ ಪರ ವಕೀಲ ಸಜನ್ ಪೂವಯ್ಯ ವಾದ ಮಂಡಿಸಿದರು. ಈ ಸಂಬಂಧ ಕೋರ್ಟ್, ಬ್ಯಾಂಕುಗಳಿಗೆ ನೋಟಿಸ್ ಜಾರಿ ಮಾಡಿದೆ.
6200 ಕೋಟಿ ರೂಪಾಯಿ ಸಾಲ ಕೊಡಬೇಕಿತು. ಅದರಲ್ಲಿ 14,000 ಕೋಟಿ ರೂ ವಸೂಲಾಗಿದೆ. ಹೀಗೆಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ರೂ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ಬ್ಯಾಂಕ್ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್ಗೆ ವಕೀಲ ಸಜನ್ ಪೂವಯ್ಯ ಮನವಿ ಮಾಡಿದರು.
ಇನ್ನು ವಿಜಯ್ ಮಲ್ಯ ಪರ ವಕೀಲ ಸಜನ್ ಪೂವಯ್ಯ ಅವರ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಪೀಠ, ಬ್ಯಾಂಕ್ಗಳು ಹಾಗೂ ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ ಮುಂದಿನ ವಿಚಾರಣೆಯನ್ನು ಫೆಬ್ರವರಿ.19ಕ್ಕೆ ಮುಂದೂಡಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…