ಬೆಂಗಳೂರು: ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದು, ಈ ಸಂಬಂಧ ಇಂದು ಮಲ್ಯ ಪರ ವಕೀಲ ಸಜನ್ ಪೂವಯ್ಯ ವಾದ ಮಂಡಿಸಿದರು. ಈ ಸಂಬಂಧ ಕೋರ್ಟ್, ಬ್ಯಾಂಕುಗಳಿಗೆ ನೋಟಿಸ್ ಜಾರಿ ಮಾಡಿದೆ.
6200 ಕೋಟಿ ರೂಪಾಯಿ ಸಾಲ ಕೊಡಬೇಕಿತು. ಅದರಲ್ಲಿ 14,000 ಕೋಟಿ ರೂ ವಸೂಲಾಗಿದೆ. ಹೀಗೆಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ರೂ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ಬ್ಯಾಂಕ್ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್ಗೆ ವಕೀಲ ಸಜನ್ ಪೂವಯ್ಯ ಮನವಿ ಮಾಡಿದರು.
ಇನ್ನು ವಿಜಯ್ ಮಲ್ಯ ಪರ ವಕೀಲ ಸಜನ್ ಪೂವಯ್ಯ ಅವರ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಪೀಠ, ಬ್ಯಾಂಕ್ಗಳು ಹಾಗೂ ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ ಮುಂದಿನ ವಿಚಾರಣೆಯನ್ನು ಫೆಬ್ರವರಿ.19ಕ್ಕೆ ಮುಂದೂಡಿದರು.
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…
ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…