ರಾಜ್ಯ

ಸ್ಮಾರ್ಟ್ ಮೀಟರ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಉಚ್ಛ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.

ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸುವ ಕುರಿತು ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ಸ್ಮಾರ್ಟ್‌ ಮೀಟರ್‌ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಈಗಾಗಲೇ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ ಎಂಬ ಅಂಶವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, ವಿಭಾಗೀಯ ಪೀಠದಲ್ಲಿ ಈ ವಿಚಾರಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಾಗಿದೆ. ಪಿಐಎಲ್ ನಲ್ಲಿ ರಿಟ್ ಅರ್ಜಿಯ ಅಂಶಗಳನ್ನು ಯಥಾವತ್ತಾಗಿ ಉಲ್ಲೇಖಿಸಲಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದರು.

ಈ ಅರ್ಜಿದಾರರು ಹೊಸ ವಿದ್ಯುತ್‌ ಗ್ರಾಹಕರಲ್ಲ. ಹಾಗಾಗಿ, ಅವರ ಮನೆಗಳಿಗೆ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸಲು ರಾಜ್ಯ ಸರ್ಕಾರ ಒತ್ತಾಯಿಸಿಲ್ಲ. ಸ್ಮಾರ್ಟ್ ಮೀಟರ್ ಅಳವಡಿಕೆ ಹೊಸ ಮನೆಗಳಿಗೆ ಮಾತ್ರವೇ ಹೊರತು ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಅಲ್ಲ. ಹಾಲಿ ಗ್ರಾಹಕರು ಇಚ್ಛಿಸಿದ್ದಲ್ಲಿ ಮಾತ್ರ ಸ್ಮಾರ್ಟ್‌ ಮೀಟರ್‌ ಅಳವಡಿಸಿಕೊಳ್ಳಬಹುದು ಎಂದು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಈ ಹಿಂದೆಯೇ ಹೇಳಿದ್ದರು. ಈ ಎಲ್ಲ ಅಂಶಗಳನ್ನು ಗಮನಲ್ಲಿಟ್ಟುಕೊಂಡು ಏಕ ಸದ್ಯ ಪೀಠವು ರಿಟ್‌ ಅರ್ಜಿಯನ್ನು ತಿರಸ್ಕರಿಸಿದೆ.

ಆಂದೋಲನ ಡೆಸ್ಕ್

Recent Posts

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…

9 mins ago

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

1 hour ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

6 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

8 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

16 hours ago