ರಾಜ್ಯ

ಶಾಲೆಗಳಲ್ಲಿ ವಂದೇ ಮಾತರಂ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ ಹೈಕೋರ್ಟ್‌ನಿಂದ ಅರ್ಜಿ ವಜಾ

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ’ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್ ಇಂದು ಅದನ್ನು ವಜಾಗೊಳಿಸಿದೆ.

ಬೆಂಗಳೂರಿನ ವಕೀಲ ಸೋಮಶೇಖರ್ ರಾಜವಂಶಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಅರವಿಂದ್ ಕಾಮತ್ ಅವರು ಕೇಂದ್ರ ಗೃಹ ಇಲಾಖೆಯ ಆದೇಶದಲ್ಲಿ ವಂದೇ ಮಾತರಂ ಗೀತೆ ಹಾಡಬಹುದು ಎಂಬ ಪದ ಬಳಕೆ ಮಾಡಲಾಗಿದ್ದು, ಅದು ಕಡ್ಡಾಯವಲ್ಲ ಎಂಬುದನ್ನು ಸೂಚಿಸುತ್ತದೆ. ಅಲ್ಲದೇ, ಈಚೆಗೆ ಸುಪ್ರೀಂ ಕೋರ್ಟ್ ಇಂಥದ್ದೇ ಮನವಿ ಒಳಗೊಂಡಿದ್ದ ಪಿಐಎಲ್ ವಜಾಗೊಳಿಸಿದೆ ಎಂದರು.

ಇದನ್ನು ಆಲಿಸಿದ ಪೀಠವು ವಂದೇ ಮಾತರಂ ಗೀತೆಯನ್ನು ಯಾವುದೇ ಶಾಸನಬದ್ಧ ಚೌಕಟ್ಟಿನಲ್ಲಿ ಸೇರ್ಪಡೆ ಮಾಡಲಾಗಿಲ್ಲ. ಕೇಂದ್ರ ಸರ್ಕಾರದ ಆದೇಶದಲ್ಲಿ ಸಾಧ್ಯತೆ ಎಂಬ ಪದ ಬಳಕೆ ಮಾಡಿದ್ದು, ಅದು ಕಡ್ಡಾಯವಲ್ಲ. ರಾಷ್ಟ್ರಗೀತೆಯಂತೆ ವಂದೇ ಮಾತರಂ ಗೀತೆಯ ಗಾಯನ ಕಡ್ಡಾಯವಲ್ಲ. ಇಂಥದ್ದೇ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ” ಎಂದು ಅರ್ಜಿ ವಜಾಗೊಳಿಸಿತು.

ವಂದೇ ಮಾತರಂ ಗೀತೆಯನ್ನು ಶಾಲೆಗಳ ಪ್ರಾರಂಭಕ್ಕೂ ಮುನ್ನ ಕಡ್ಡಾಯವಾಗಿ ಹಾಡಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯ ಅಧಿಕೃತ ಜಾಲಾತಾಣದಲ್ಲಿ ಭಾರತದ ರಾಷ್ಟ್ರಗೀತೆಗೆ ಸಂಬಂಧಿಸಿದ ಆದೇಶಗಳು ಎಂಬ ಆದೇಶ ಪ್ರಕಟಿಸಲಾಗಿದೆ. ಈ ಆದೇಶದಂತೆ ವಂದೇ ಮಾತರಂ ಗೀತೆಯಲ್ಲಿರುವ ಆರು ಚರಣಗಳುಳ್ಳ ಅಧಿಕೃತ ಆವೃತ್ತಿಯನ್ನು ಎಲ್ಲ ಶಾಲೆಗಳು ಪ್ರಾರಂಭಕ್ಕೂ ಮುನ್ನ ಪ್ರತಿ ದಿನ ಸಾಮೂಹಿಕವಾಗಿ ಹಾಡಬೇಕು ಎಂದು ಸೂಚಿಸಲಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

58 mins ago

ಕೊಡಗು ಜಿಲ್ಲೆಗೆ ಈ ಬಾರಿಯೂ ದೊರಕದ ಸಚಿವ ಸ್ಥಾನ

ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…

1 hour ago

ಸಕ್ಕರೆ ನಾಡಿಗೆ ‘ಅಧಿಕಾರ’ದ ಸಿಹಿ, ಸಂಭ್ರಮ

ಬಿ.ಟಿ.ಮೋಹನ್ ಕುಮಾರ್ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿಗೆ ಸಚಿವ ಸ್ಥಾನ  ಮಂಡ್ಯ: ಡಿ.ಕೆ.ಶಿವಕುಮಾರ್ ನೇತೃತ್ವದ  ಸರ್ಕಾರದಲ್ಲಿ ಈ ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಎನ್‌.ಚಲುವರಾಯಸ್ವಾಮಿ…

1 hour ago

ಡಿಕೆಶಿ ಸಂಪುಟ: ಕುಗ್ಗಿದ ಮೈಸೂರು ಜಿಲ್ಲೆ ಪ್ರಾಬಲ್ಯ

ಕೆ.ಬಿ. ರಮೇಶನಾಯಕ ಸಿದ್ದರಾಮಯ್ಯ ಸಂಪುಟದಲ್ಲಿ ೮ ವರ್ಷವೂ ಸಚಿವರಾಗಿದ್ದ ಡಾ.ಎಚ್‌ಸಿಎಂ ಹೊರಕ್ಕೆ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್‌ಗೂ ಕೊಕ್ ಮೈಸೂರು:…

1 hour ago

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

1 day ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

1 day ago