ಬೆಂಗಳೂರು: ರಾಜ್ಯದ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರೀಲೀಫ್ ನೀಡಿದೆ.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಈ ಬಗ್ಗೆ ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರ ದಾಖಲಿಸಿಕೊಂಡು ನೋಟಿಸ್ ಜಾರಿ ಮಾಡಿತ್ತು.
ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆ ಉಂಟುಮಾಡುವ ಹೇಳಿಕೆ ನೀಡಿದ ಹಿನ್ನಲೆಯಲ್ಲಿ 7 ದಿನಗಳ ಒಳಗಾಗಿ ಮಹಿಳಾ ಆಯೋಗದ ಮುಂದೆ ಖುದ್ದು ಹಾಜರಾಗಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ಹಾಗೂ ವಿವರಣೆ ನೀಡುವಂತೆ ಸೂಚಿಸಲಾಗಿತ್ತು.
ಇದನ್ನು ಪ್ರಶ್ನಿಸಿ ಎಚ್.ಡಿ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ತಡೆಯಾಜ್ಞೆ ನೀಡಿದೆ.
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…