ರಾಜ್ಯ

ಬೆಂಗಳೂರು ಟರ್ಫ್ ಕ್ಲಬ್ ಪ್ರಕರಣ: ಕುದುರೆ ರೇಸ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ನಗರದ ಬೆಂಗಳೂರು ಟರ್ಫ್ ಕ್ಲಬ್​ನಲ್ಲಿ ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ.

ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠವು ಇಂದು ಪ್ರಕಟ ಮಾಡಿದೆ.

ಸರ್ಕಾರವು ಮೇಲ್ಮನವಿಯಲ್ಲಿ ಕೋರಿರುವ ಅಂಶಗಳಲ್ಲಿ ಕುದುರೆ ಪಂದ್ಯಗಳ ಆಯೋಜಿಸದಂತೆ ಕೋರಿರುವುದಕ್ಕೆ ಬಲವಾದ ಕಾರಣಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯ ಪೀಠದ ಆದೇಶವನ್ನು ಅಮಾನತ್ತಿಲ್ಲಿಟ್ಟಿರುವುದಾಗಿ ಪೀಠ ತಿಳಿಸಿದೆ.

ಅಲ್ಲದೇ, ಅರ್ಜಿ ವಿಚಾರಣೆ ಬಾಕಿ ಇರುವಾಗ ಅರ್ಜಿ ವಿಚಾರಣೆ ಪೂರ್ಣಗೊಳಿಸುವವರೆಗೂ ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಆನ್ ಕೋರ್ಸ್ ಮತ್ತು ಆಫ್ ಕೋರ್ಸ್‌ಗಳ ಆಯೋಜನೆ ಹಾಗೂ ಬೆಟ್ಟಿಂಗ್‌ ನಡೆಸುವುದನ್ನು ನಿಷೇಧಿಸಲಾಗಿದೆ.

ಇದು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಉಳಿದ ಅರ್ಜಿದಾರರ ಹಕ್ಕಿನ ವ್ಯಾಪ್ತಿಯ ವಿಚಾರವನ್ನು ಅಂತಿಮ ವಿಚಾರಣೆಯ ಸಂದರ್ಭದಲ್ಲಿ ನಿರ್ಧರಿಸಲು ಮುಕ್ತವಾಗಿರಿಸಲಾಗಿದೆ. ಅಂತಿಮ ವಿಚಾರಣೆಯನ್ನ ಆಗಸ್ಟ್‌ 12ಕ್ಕೆ ಮುಂದೂಡಲಾಗಿದೆ.

andolana

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

1 hour ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

7 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

7 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

7 hours ago