ಬೆಂಗಳೂರು: ನಗರದ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ.
ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠವು ಇಂದು ಪ್ರಕಟ ಮಾಡಿದೆ.
ಸರ್ಕಾರವು ಮೇಲ್ಮನವಿಯಲ್ಲಿ ಕೋರಿರುವ ಅಂಶಗಳಲ್ಲಿ ಕುದುರೆ ಪಂದ್ಯಗಳ ಆಯೋಜಿಸದಂತೆ ಕೋರಿರುವುದಕ್ಕೆ ಬಲವಾದ ಕಾರಣಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯ ಪೀಠದ ಆದೇಶವನ್ನು ಅಮಾನತ್ತಿಲ್ಲಿಟ್ಟಿರುವುದಾಗಿ ಪೀಠ ತಿಳಿಸಿದೆ.
ಅಲ್ಲದೇ, ಅರ್ಜಿ ವಿಚಾರಣೆ ಬಾಕಿ ಇರುವಾಗ ಅರ್ಜಿ ವಿಚಾರಣೆ ಪೂರ್ಣಗೊಳಿಸುವವರೆಗೂ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ಆನ್ ಕೋರ್ಸ್ ಮತ್ತು ಆಫ್ ಕೋರ್ಸ್ಗಳ ಆಯೋಜನೆ ಹಾಗೂ ಬೆಟ್ಟಿಂಗ್ ನಡೆಸುವುದನ್ನು ನಿಷೇಧಿಸಲಾಗಿದೆ.
ಇದು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಉಳಿದ ಅರ್ಜಿದಾರರ ಹಕ್ಕಿನ ವ್ಯಾಪ್ತಿಯ ವಿಚಾರವನ್ನು ಅಂತಿಮ ವಿಚಾರಣೆಯ ಸಂದರ್ಭದಲ್ಲಿ ನಿರ್ಧರಿಸಲು ಮುಕ್ತವಾಗಿರಿಸಲಾಗಿದೆ. ಅಂತಿಮ ವಿಚಾರಣೆಯನ್ನ ಆಗಸ್ಟ್ 12ಕ್ಕೆ ಮುಂದೂಡಲಾಗಿದೆ.
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…