ಬೆಂಗಳೂರು: ನಗರದ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ.
ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠವು ಇಂದು ಪ್ರಕಟ ಮಾಡಿದೆ.
ಸರ್ಕಾರವು ಮೇಲ್ಮನವಿಯಲ್ಲಿ ಕೋರಿರುವ ಅಂಶಗಳಲ್ಲಿ ಕುದುರೆ ಪಂದ್ಯಗಳ ಆಯೋಜಿಸದಂತೆ ಕೋರಿರುವುದಕ್ಕೆ ಬಲವಾದ ಕಾರಣಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯ ಪೀಠದ ಆದೇಶವನ್ನು ಅಮಾನತ್ತಿಲ್ಲಿಟ್ಟಿರುವುದಾಗಿ ಪೀಠ ತಿಳಿಸಿದೆ.
ಅಲ್ಲದೇ, ಅರ್ಜಿ ವಿಚಾರಣೆ ಬಾಕಿ ಇರುವಾಗ ಅರ್ಜಿ ವಿಚಾರಣೆ ಪೂರ್ಣಗೊಳಿಸುವವರೆಗೂ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ಆನ್ ಕೋರ್ಸ್ ಮತ್ತು ಆಫ್ ಕೋರ್ಸ್ಗಳ ಆಯೋಜನೆ ಹಾಗೂ ಬೆಟ್ಟಿಂಗ್ ನಡೆಸುವುದನ್ನು ನಿಷೇಧಿಸಲಾಗಿದೆ.
ಇದು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಉಳಿದ ಅರ್ಜಿದಾರರ ಹಕ್ಕಿನ ವ್ಯಾಪ್ತಿಯ ವಿಚಾರವನ್ನು ಅಂತಿಮ ವಿಚಾರಣೆಯ ಸಂದರ್ಭದಲ್ಲಿ ನಿರ್ಧರಿಸಲು ಮುಕ್ತವಾಗಿರಿಸಲಾಗಿದೆ. ಅಂತಿಮ ವಿಚಾರಣೆಯನ್ನ ಆಗಸ್ಟ್ 12ಕ್ಕೆ ಮುಂದೂಡಲಾಗಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…