ರಾಜ್ಯ

ಬೆಂಗಳೂರು ಟರ್ಫ್ ಕ್ಲಬ್ ಪ್ರಕರಣ: ಕುದುರೆ ರೇಸ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ನಗರದ ಬೆಂಗಳೂರು ಟರ್ಫ್ ಕ್ಲಬ್​ನಲ್ಲಿ ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ.

ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠವು ಇಂದು ಪ್ರಕಟ ಮಾಡಿದೆ.

ಸರ್ಕಾರವು ಮೇಲ್ಮನವಿಯಲ್ಲಿ ಕೋರಿರುವ ಅಂಶಗಳಲ್ಲಿ ಕುದುರೆ ಪಂದ್ಯಗಳ ಆಯೋಜಿಸದಂತೆ ಕೋರಿರುವುದಕ್ಕೆ ಬಲವಾದ ಕಾರಣಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯ ಪೀಠದ ಆದೇಶವನ್ನು ಅಮಾನತ್ತಿಲ್ಲಿಟ್ಟಿರುವುದಾಗಿ ಪೀಠ ತಿಳಿಸಿದೆ.

ಅಲ್ಲದೇ, ಅರ್ಜಿ ವಿಚಾರಣೆ ಬಾಕಿ ಇರುವಾಗ ಅರ್ಜಿ ವಿಚಾರಣೆ ಪೂರ್ಣಗೊಳಿಸುವವರೆಗೂ ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಆನ್ ಕೋರ್ಸ್ ಮತ್ತು ಆಫ್ ಕೋರ್ಸ್‌ಗಳ ಆಯೋಜನೆ ಹಾಗೂ ಬೆಟ್ಟಿಂಗ್‌ ನಡೆಸುವುದನ್ನು ನಿಷೇಧಿಸಲಾಗಿದೆ.

ಇದು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಉಳಿದ ಅರ್ಜಿದಾರರ ಹಕ್ಕಿನ ವ್ಯಾಪ್ತಿಯ ವಿಚಾರವನ್ನು ಅಂತಿಮ ವಿಚಾರಣೆಯ ಸಂದರ್ಭದಲ್ಲಿ ನಿರ್ಧರಿಸಲು ಮುಕ್ತವಾಗಿರಿಸಲಾಗಿದೆ. ಅಂತಿಮ ವಿಚಾರಣೆಯನ್ನ ಆಗಸ್ಟ್‌ 12ಕ್ಕೆ ಮುಂದೂಡಲಾಗಿದೆ.

andolana

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

4 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

4 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

4 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

4 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

4 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

4 hours ago