ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್ ಒಡೆಯರ್ ಅವರ ಆಯ್ಕೆ ಅಸಿಂಧುಗೊಳಿಸಿ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಸಂಸದ ಯದುವೀರ್ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಎಸ್ಪಿ ಪಕ್ಷದಿಂದ ಸ್ಪರ್ಧಿಸಿದ್ದ ರೇವತಿ ರಾಜ್ ಅಲಿಯಾಸ್ ಭೀಮಪುತ್ರಿ ರೇವತಿ ರಾಜ್ ತಮ್ಮ ನಾಮಪತ್ರ ತಿರಸ್ಕರಿಸಿರುವುದಕ್ಕೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇಂದು (ಜ.24) ನ್ಯಾಯಾಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಪ್ರತಿವಾದಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ಹಿನ್ನಲೆ:
ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಪಕ್ಷದಿಂದ ಸ್ಪರ್ಧಿಸಿದ್ದ ರೇವತಿ ರಾಜ್ 2024ರ ಏಪ್ರಿಲ್ 4ರಂದು ಆಯೋಗಕ್ಕೆ ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರದ ಕಲಂ 7, 7(ಎ), 7(ಬಿ) ಗಳನ್ನು ಸರಿ ಭರ್ತಿ ಮಾಡಿಲ್ಲ ಎಂದು ಚುನಾವಣಾಧಿಕಾರಿ ನಾಮಪತ್ರ ತಿರಸ್ಕರಿಸಿದ್ದರು.
ಸೂಕ್ತ ಸಮಯದಲ್ಲಿ ನಾಮಪತ್ರ ಸಲ್ಲಸಿದ್ದರೂ ತಮ್ಮ ನಾಮಪತ್ರ ತಿರಸ್ಕರಿಸಲಾಗಿದೆ. ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರದ ಮೂಲಕ ದೂರು ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ರೇವತಿ ರಾಜ್ ಕೋರ್ಟ್ ಮೊರೆ ಹೋಗಿದ್ದರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…