ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿರುವ ಬಗ್ಗೆ ಸರ್ಕಾರ ತನಿಖೆಯಾಗಬೇಕು ಎಂದು ಮೃತ ರೇಣುಕಾಸ್ವಾಮಿ ತಂದೆ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈಲಿನಲ್ಲಿ ದರ್ಶನ್ಗೆ ಸಿಗುತ್ತಿರುವ ರಾಜಾತಿಥ್ಯದ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಈ ಬೆಳವಣಿಗೆಯಿಂದ ನಮಗೆ ತುಂಬಾ ನೋವಾಗಿದೆ. ನಮಗೆ ನ್ಯಾಯ ಸಿಗುವುದರ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದಲೇ ಈ ಬಗ್ಗೆ ತನಿಖೆಯಾಗಬೇಕು. ಇಲ್ಲವಾದರೆ ಈ ವಿಚಾರ ಮುಚ್ಚಿಹೋಗುತ್ತದೆ ಎಂದರು.
ಯಾರೇ ಆಗಲಿ, ಜೈಲಿನಲ್ಲಿ ಇದ್ದವರು ಸಾಮಾನ್ಯರು. ಯಾರು ದೊಡ್ಡವರಲ್ಲ. ದರ್ಶನ್ ಕೂಡ ಕೊಲೆ ಆರೋಪಿ ಅವರಿಗೆ ಈ ರೀತಿಯ ಸೌಲಭ್ಯಗಳು ಸಿಗುತ್ತಿರುವುದು ಸರಿಯಲ್ಲ ಎಂದು ಮೃತ ರೇಣುಕಾಸ್ವಾಮಿ ತಂದೆ ಅಭಿಪ್ರಾಯ ವ್ಯಕ್ತಪಡಿಸಿದರು.
ಟೆಹರಾನ್: ಟೆಹರಾನ್ ಮೇಲೆ ಅಮೇರಿಕಾ ನಡೆಸಿದ ಬೃಹತ್ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್ಗಳನ್ನು ಹತ್ಯೆ ಮಾಡಲಾಗಿದೆ. ಈ…
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…