ರಾಜ್ಯ

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಗ್ರೇಡ್‌ ಬೇಡ ಅಂಕ ನೀಡಿ ; ಹೈಕೋರ್ಟ್‌ ಮತ್ತೊಮ್ಮೆ ಆದೇಶ

ಬೆಂಗಳೂರು : ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್ ಆದೇಶ ಮರುಪರಿಶೀಲನೆ ಕೋರಿದ್ದ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಇ.ಎಸ್.ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ, ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ಆದೇಶ ನೀಡಿದೆ. ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ರು. ಆದ್ರೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ಅರ್ಜಿ ವಜಾಗೊಂಡಿದೆ.

ಸರ್ಕಾರದ ಪರ ಎ.ಜಿ ವಾದ ಏನಿತ್ತು?
ಹಿಂದಿ ಭಾಷೆಯಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಅನುತ್ತೀರ್ಣಗೊಂಡಿದ್ದರು. ಹೀಗಾಗಿ ವಿದ್ಯಾರ್ಥಿಗಳ ಮೇಲೆ ಒತ್ತಡ ಕಡಿಮೆ ಮಾಡಲು ಕ್ರಮ ವಹಿಸಿ, ಸೂಕ್ತ ತಿದ್ದುಪಡಿಯೊಂದಿಗೆ ನಿಯಮ ರಚಿಸಲು ಸರ್ಕಾರ ಕರಡು ರೂಪಿಸುತ್ತಿದೆ. ಅಂಕದ ಬದಲು ಗ್ರೇಡ್ ನೀಡಲಾಗುತ್ತಿದೆ ಎಂದು ಎಜಿ ವಾದ ಮಂಡಿಸಿದ್ರು.

ಹೈಕೋರ್ಟ್ ಪೀಠ ತರಾಟೆ
ಸರ್ಕಾರಕ್ಕೆ ನ್ಯಾ.ಇ.ಎಸ್.ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಕೆಲ ಪ್ರಶ್ನೆ ಕೇಳುವ ಮೂಲಕ ತರಾಟೆಗೆ ತೆಗೆದುಕೊಂಡಿದೆ. ಎಸ್ಎಸ್ಎಲ್ ಸಿ ಪರೀಕ್ಷೆ ಅಧಿಸೂಚನೆ ಹೊರಡಿಸಿದಾಗಲೇ ಇದನ್ನು ಸ್ಪಷ್ಟಪಡಿಸಬೇಕಿತ್ತು. ಅಧಿಸೂಚನೆಯಲ್ಲಿಲ್ಲದ ಗ್ರೇಡ್ ಪದ್ದತಿಯನ್ನು ಈಗ ಅನುಷ್ಟಾನಗೊಳಿಸುತ್ತಿದ್ದೀರಿ. ಪಿಯುಸಿಯಲ್ಲಿ ಈಗ 83 % ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ ಎಂದು ಕೋರ್ಟ್ ಗರಂ ಆಗಿದೆ.

ನಿಯಮ ರೂಪಿಸಿದ ಬಳಿಕ ಸರ್ಕಾರ ಸೂಕ್ತವೆನಿಸಿದ ಕ್ರಮ ಕೈಗೊಳ್ಳಬಹುದು. ನಿಯಮ ರೂಪಿಸುವ ಮುಂಚಿನ ಪರೀಕ್ಷೆಯ ಅಂಕ ಪದ್ದತಿ ಬದಲಾವಣೆ ಸೂಕ್ತವಲ್ಲ ಎಂದು ಅಭಿಪ್ರಾಯ ತಿಳಿಸುವ ಮೂಲಕ, 2025-26 ನೇ ಸಾಲಿಗೆ ಹಿಂದಿ ಭಾಷೆಗೆ ಅಂಕ ನೀಡಲು ಹೈಕೋರ್ಟ್ ಆದೇಶ ನೀಡಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

52 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago