ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್ ದಾಖಲಿಸಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಉಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಅವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು.
ವಾದ ಮತ್ತು ಪ್ರತಿವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದ ಉಚ್ಚ ನ್ಯಾಯಾಲಯ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ತಡೆಗಟ್ಟುವಿಕೆ ಕಾಯ್ದೆ, 1988 ರ ಸೆಕ್ಷನ್ 17(ಎ) ಅಡಿಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರಿಗೆ ಸೂಚಿಸಿದ್ದಾರೆ.ಇದೇ ವೇಳೆ ಹಾಲಿ ಕರ್ನಾಟಕ ಕೈಮಗ್ಗ ನಿಗಮದ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ತನಿಖೆಗೆ ಉಚ್ಚ ನ್ಯಾಯಾಲಯ ಹಸಿರು ನಿಶಾನೆ ತೋರಿದೆ.
ಈ ಹಿಂದೆ ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿತ್ತು. ರೋಹಿಣಿ ಸಿಂಧೂರಿ ಅವರು ನಿಯಮಗಳನ್ನು ಮೀರಿ ಇಲಾಖೆ ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತ ಪ್ರಾಥಮಿಕ ತನಿಖೆಯಲ್ಲಿ ಅವರು ಅಸಮರ್ಪಕ ಉತ್ತರ ನೀಡಿದ್ದರು ಮತ್ತು ಯಾವುದೇ ದಾಖಲೆ ನೀಡಿರಲಿಲ್ಲ.
ಬಟ್ಟೆ ಬ್ಯಾಗ್ ಖರೀದಿಯಲ್ಲಿ 9.ರೂಗೆ ಆಗುವ ಒಂದು ಬ್ಯಾಗ್ಗೆ 52ರೂ ಕೊಟ್ಟು ಖರೀದಿ ಮಾಡಿದ್ದಾರೆ. ಖರೀಗೆ ಒಟ್ಟು 7 ಕೋಟಿ ಖರ್ಜುಮಾಡಿದ್ದಾರೆ. ಖರೀದಿಯಲ್ಲಿ ಕಿಕ್ ಬ್ಯಾಕ್ ನಡೆದಿದೆ ಎಂದು ಅವರ ಮೇಲೆ ಅರೋಪವಿದೆ. ಯಾವುದೇ ಜಿಲ್ಲಾಧಿಕಾರಿಗೆ ಆಡಳಿತಾತ್ಮಕವಾಗಿ 2 ಕೋಟಿ ರೂಪಾಯಿಗೆ ಅನುಮೋದನೆ ನೀಡಲು ಅವಕಾಶ ಇದೆ. ಆದರೆ ರೋಹಿಣಿ ಅವರು 7 ಕೋಟಿ ರೂಪಾಯಿ ಅಧಿಕ ಮೊತ್ತಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಾ.ರಾ.ಮಹೇಶ್ ನೇರ ಆರೋಪ ಮಾಡಿದ್ದರು. ಮೈಸೂರು ಮೂಲದ ಎನ್.ಆರ್.ರವಿ ಚಂದ್ರೇಗೌಡ ಎಂಬವರು ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…