ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್ ದಾಖಲಿಸಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಉಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಅವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು.
ವಾದ ಮತ್ತು ಪ್ರತಿವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದ ಉಚ್ಚ ನ್ಯಾಯಾಲಯ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ತಡೆಗಟ್ಟುವಿಕೆ ಕಾಯ್ದೆ, 1988 ರ ಸೆಕ್ಷನ್ 17(ಎ) ಅಡಿಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರಿಗೆ ಸೂಚಿಸಿದ್ದಾರೆ.ಇದೇ ವೇಳೆ ಹಾಲಿ ಕರ್ನಾಟಕ ಕೈಮಗ್ಗ ನಿಗಮದ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ತನಿಖೆಗೆ ಉಚ್ಚ ನ್ಯಾಯಾಲಯ ಹಸಿರು ನಿಶಾನೆ ತೋರಿದೆ.
ಈ ಹಿಂದೆ ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿತ್ತು. ರೋಹಿಣಿ ಸಿಂಧೂರಿ ಅವರು ನಿಯಮಗಳನ್ನು ಮೀರಿ ಇಲಾಖೆ ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತ ಪ್ರಾಥಮಿಕ ತನಿಖೆಯಲ್ಲಿ ಅವರು ಅಸಮರ್ಪಕ ಉತ್ತರ ನೀಡಿದ್ದರು ಮತ್ತು ಯಾವುದೇ ದಾಖಲೆ ನೀಡಿರಲಿಲ್ಲ.
ಬಟ್ಟೆ ಬ್ಯಾಗ್ ಖರೀದಿಯಲ್ಲಿ 9.ರೂಗೆ ಆಗುವ ಒಂದು ಬ್ಯಾಗ್ಗೆ 52ರೂ ಕೊಟ್ಟು ಖರೀದಿ ಮಾಡಿದ್ದಾರೆ. ಖರೀಗೆ ಒಟ್ಟು 7 ಕೋಟಿ ಖರ್ಜುಮಾಡಿದ್ದಾರೆ. ಖರೀದಿಯಲ್ಲಿ ಕಿಕ್ ಬ್ಯಾಕ್ ನಡೆದಿದೆ ಎಂದು ಅವರ ಮೇಲೆ ಅರೋಪವಿದೆ. ಯಾವುದೇ ಜಿಲ್ಲಾಧಿಕಾರಿಗೆ ಆಡಳಿತಾತ್ಮಕವಾಗಿ 2 ಕೋಟಿ ರೂಪಾಯಿಗೆ ಅನುಮೋದನೆ ನೀಡಲು ಅವಕಾಶ ಇದೆ. ಆದರೆ ರೋಹಿಣಿ ಅವರು 7 ಕೋಟಿ ರೂಪಾಯಿ ಅಧಿಕ ಮೊತ್ತಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಾ.ರಾ.ಮಹೇಶ್ ನೇರ ಆರೋಪ ಮಾಡಿದ್ದರು. ಮೈಸೂರು ಮೂಲದ ಎನ್.ಆರ್.ರವಿ ಚಂದ್ರೇಗೌಡ ಎಂಬವರು ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…