ರಾಜ್ಯ

ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್‌ ನಕಾರ ; ಸರ್ಕಾರಕ್ಕೆ ಬಿಗ್‌ ರಿಲೀಫ್‌

ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಜಾತಿಗಣತಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಎರಡು ದಿನ ವಿವರವಾದ ವಾದಗಳನ್ನು ಆಲಿಸಿತು. ಅಂತಿಮವಾಗಿ ಇಂದು ಜಾತಿ ಗಣತಿಗೆ ತಡೆ ನೀಡಲು ನಿರಾಕರಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ಇದನ್ನೂ ಓದಿ:-ಸಮೀಕ್ಷೆ ಕಾರ್ಯದಿಂದ ವ್ಯತ್ಯಯವಾಗದು ವಿದ್ಯುತ್ ಬಿಲ್ : ಬೆಸ್ಕಾಂ ಸ್ಪಷ್ಟನೆ

ಆದರೆ ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ನಡೆಸಲು ಕೆಲವು ಷರತ್ತುಗಳನ್ನು ಹೈಕೋರ್ಟ್ ವಿಧಿಸಿದ್ದು, ದತ್ತಾಂಶವನ್ನು ರಾಜ್ಯ ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು ಎಂದು ಸೂಚಿಸಿದೆ. ಜನರು ಸ್ವಯಂಪ್ರೇರಣೆಯಿಂದ ಮಾಹಿತಿ ನೀಡಿದರಷ್ಟೇ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಹೈಕೋರ್ಟ್ ಮಹತ್ವದ ಷರತ್ತು ವಿಧಿಸಿ, ವಿಚಾರಣೆಯನ್ನು ಡಿಸೆಂಬರ್ ಎರಡನೇ ವಾರಕ್ಕೆ ಮುಂದೂಡಿದೆ.

ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ಅರ್ಜಿಗಳು ಯಾವುದೇ ಸಾಂವಿಧಾನಿಕ ನಿಬಂಧನೆಗಳನ್ನು ಅಥವಾ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ, 1995 ರ ನಿರ್ದಿಷ್ಟ ವಿಭಾಗಗಳನ್ನು ಗುರಿಯಾಗಿಸಿಕೊಂಡಿಲ್ಲ. ಆದರೆ ವಾಸ್ತವವಾಗಿ ಸರ್ಕಾರ ಅಧಿಕಾರ ಚಲಾಯಿಸುವುದನ್ನು ತಡೆಯಲು ಪ್ರಯತ್ನಿಸುತ್ತಿವೆ ಎಂದು ಹೇಳಿದರು.

ಅರ್ಜಿದಾರರು ಎತ್ತಿರುವ ಆಕ್ಷೇಪಣೆಗಳು, ಸಮೀಕ್ಷೆಯು “ಅವೈಜ್ಞಾನಿಕ” ಎಂಬ ಸಾಮಾನ್ಯ ಆರೋಪಗಳಾಗಿವೆ. ಸಮೀಕ್ಷೆಯ ವರದಿಯನ್ನು ಸಾರ್ವಜನಿಕಗೊಳಿಸಿದ ನಂತರ ಮಾತ್ರ ಇದನ್ನು ಪರಿಶೀಲಿಸಬಹುದು ಎಂದು ಅವರು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

13 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago