Public inconvenience will not be tolerated: High Court warns transport employees
ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಜಾತಿಗಣತಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಎರಡು ದಿನ ವಿವರವಾದ ವಾದಗಳನ್ನು ಆಲಿಸಿತು. ಅಂತಿಮವಾಗಿ ಇಂದು ಜಾತಿ ಗಣತಿಗೆ ತಡೆ ನೀಡಲು ನಿರಾಕರಿಸಿ ಮಧ್ಯಂತರ ಆದೇಶ ಹೊರಡಿಸಿದೆ.
ಇದನ್ನೂ ಓದಿ:-ಸಮೀಕ್ಷೆ ಕಾರ್ಯದಿಂದ ವ್ಯತ್ಯಯವಾಗದು ವಿದ್ಯುತ್ ಬಿಲ್ : ಬೆಸ್ಕಾಂ ಸ್ಪಷ್ಟನೆ
ಆದರೆ ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ನಡೆಸಲು ಕೆಲವು ಷರತ್ತುಗಳನ್ನು ಹೈಕೋರ್ಟ್ ವಿಧಿಸಿದ್ದು, ದತ್ತಾಂಶವನ್ನು ರಾಜ್ಯ ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು ಎಂದು ಸೂಚಿಸಿದೆ. ಜನರು ಸ್ವಯಂಪ್ರೇರಣೆಯಿಂದ ಮಾಹಿತಿ ನೀಡಿದರಷ್ಟೇ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಹೈಕೋರ್ಟ್ ಮಹತ್ವದ ಷರತ್ತು ವಿಧಿಸಿ, ವಿಚಾರಣೆಯನ್ನು ಡಿಸೆಂಬರ್ ಎರಡನೇ ವಾರಕ್ಕೆ ಮುಂದೂಡಿದೆ.
ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ಅರ್ಜಿಗಳು ಯಾವುದೇ ಸಾಂವಿಧಾನಿಕ ನಿಬಂಧನೆಗಳನ್ನು ಅಥವಾ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ, 1995 ರ ನಿರ್ದಿಷ್ಟ ವಿಭಾಗಗಳನ್ನು ಗುರಿಯಾಗಿಸಿಕೊಂಡಿಲ್ಲ. ಆದರೆ ವಾಸ್ತವವಾಗಿ ಸರ್ಕಾರ ಅಧಿಕಾರ ಚಲಾಯಿಸುವುದನ್ನು ತಡೆಯಲು ಪ್ರಯತ್ನಿಸುತ್ತಿವೆ ಎಂದು ಹೇಳಿದರು.
ಅರ್ಜಿದಾರರು ಎತ್ತಿರುವ ಆಕ್ಷೇಪಣೆಗಳು, ಸಮೀಕ್ಷೆಯು “ಅವೈಜ್ಞಾನಿಕ” ಎಂಬ ಸಾಮಾನ್ಯ ಆರೋಪಗಳಾಗಿವೆ. ಸಮೀಕ್ಷೆಯ ವರದಿಯನ್ನು ಸಾರ್ವಜನಿಕಗೊಳಿಸಿದ ನಂತರ ಮಾತ್ರ ಇದನ್ನು ಪರಿಶೀಲಿಸಬಹುದು ಎಂದು ಅವರು ಸಮರ್ಥಿಸಿಕೊಂಡರು.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…