ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರಿದ್ದ ವಿಭಾಗೀಯ ಪೀಠ ಸಿಬಿಐ, ಲೋಕಾಯುಕ್ತ, ಕೇಂದ್ರ ಗೃಹ ಇಲಾಖೆ, ಪ್ರರಕಣದ ಪ್ರಮುಖ ಆರೋಪಿಗಳಾದ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನಯ್ಯ, ಹಾಗೂ ಜಮೀನು ಮಾಲೀಕ ದೇವರಾಜು ಅವರುಗಳಿಗೆ ನೋಟಿಸ್ ಜಾರಿಗೊಳಿಸಿ ಮುಂದಿನ ಅರ್ಜಿ ವಿಚಾರಣೆಯನ್ನು ಏಪ್ರಿಲ್.28ಕ್ಕೆ ಮುಂದೂಡಿತು.
ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಫೆಬ್ರವರಿ 7ರಂದು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಸಾಮಾಜಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಲೋಕಾಯುಕ್ತ ಪೊಲೀಸರು ಸರ್ಕಾರದ ಅಧೀನದಲ್ಲಿದ್ದಾರೆ. ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ. ಏಪ್ರಿಲ್.28ರಂದು ಮತ್ತೆ ವಿಚಾರಣೆ ನಡೆಯಲಿದ್ದು, ನ್ಯಾಯಾಲಯದಲ್ಲಿ ಪರ-ವಿರೋಧ ವಾದ ಮಂಡನೆ ನಡೆಯಲಿದೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…