ರಾಜ್ಯ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೆ ಶಾಕ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್‍ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರಿದ್ದ ವಿಭಾಗೀಯ ಪೀಠ ಸಿಬಿಐ, ಲೋಕಾಯುಕ್ತ, ಕೇಂದ್ರ ಗೃಹ ಇಲಾಖೆ, ಪ್ರರಕಣದ ಪ್ರಮುಖ ಆರೋಪಿಗಳಾದ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನಯ್ಯ, ಹಾಗೂ ಜಮೀನು ಮಾಲೀಕ ದೇವರಾಜು ಅವರುಗಳಿಗೆ ನೋಟಿಸ್ ಜಾರಿಗೊಳಿಸಿ ಮುಂದಿನ ಅರ್ಜಿ ವಿಚಾರಣೆಯನ್ನು ಏಪ್ರಿಲ್.28ಕ್ಕೆ ಮುಂದೂಡಿತು.

ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಫೆಬ್ರವರಿ 7ರಂದು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಸಾಮಾಜಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಲೋಕಾಯುಕ್ತ ಪೊಲೀಸರು ಸರ್ಕಾರದ ಅಧೀನದಲ್ಲಿದ್ದಾರೆ. ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ. ಏಪ್ರಿಲ್.28ರಂದು ಮತ್ತೆ ವಿಚಾರಣೆ ನಡೆಯಲಿದ್ದು, ನ್ಯಾಯಾಲಯದಲ್ಲಿ ಪರ-ವಿರೋಧ ವಾದ ಮಂಡನೆ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

23 mins ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

1 hour ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

2 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

2 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

3 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

3 hours ago