ರಾಜ್ಯ

ನಟ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಥಗ್‌ಲೈಫ್‌ ಬಿಡುಗಡೆಗೆ ಭದ್ರತೆ ಕೋರಿ ನಟ ಕಮಲ್‌ ಹಾಸನ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಿದ್ದು, ಕಮಲ್‌ ಹಾಸನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ ಅವರು, ಥಗ್‌ಲೈಫ್‌ ಚಿತ್ರ ಬಿಡುಗಡೆಗೆ ತೊಂದರೆ ಆಗುತ್ತಿದೆ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಕಮಲ್‌ ಹಾಸನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ನಿಮ್ಮ ಹೇಳಿಕೆಗಳಿಂದ ನಟ ಶಿವರಾಜ್‌ಕುಮಾರ್‌ ಮುಜುಗರ ಅನುಭವಿಸುವಂತಾಗಿದೆ. ನೆಲ, ಜಲ ವಿಚಾರದಲ್ಲಿ ರಾಜೀ ಮಾತೆ ಇಲ್ಲ. ಕಮಲ್‌ ಹಾಸನ್‌ ಕ್ಷಮೆ ಕೇಳಿದರೆ ಮಾತ್ರ ಅರ್ಜಿ ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ತೀವ್ರ ತರಾಟೆಗೆ ತೆಗೆದುಕೊಂಡರು.

ಇನ್ನು ಮುಂದುವರಿದು ಮಾತನಾಡಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ನಾನು ಕೂಡ ಥಗ್‌ಲೈಫ್‌ ಚಿತ್ರ ನೋಡಬೇಕು ಅಂದುಕೊಂಡಿದ್ದೆ. ಆದರೆ ಇಂದಿನ ಪರಿಸ್ಥಿತಿಯಿಂದ ಇದು ಸಾಧ್ಯವಾಗುತ್ತಿಲ್ಲ. ಇವತ್ತಿನ ಪರಿಸ್ಥಿತಿಗೆ ಕಮಲ್‌ ಹಾಸನ್‌ ಅವರೇ ನೇರ ಹೊಣೆ. ನೀವು ಕನ್ನಡಿಗರ ಬಳಿ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳದಿದ್ದರೆ ಕರ್ನಾಟಕ ಬಿಟ್ಟು ಬೇರೆ ಕಡೆ ನಿಮ್ಮ ಥಗ್‌ಲೈಫ್‌ ಸಿನಿಮಾ ರಿಲೀಸ್‌ ಮಾಡಿಕೊಳ್ಳಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

ಆಂದೋಲನ ಡೆಸ್ಕ್

Recent Posts

ಈಗ ಗಣರಾಜ್ಯೋತ್ಸವದಲ್ಲೂ ದ್ವೇಷದ ಉರಿಗಾಳಿ

ಗಣರಾಜ್ಯೋತ್ಸವ ಅಂದರೆ ನನಗೆ ನೆನಪಾಗೋದು ಶಾಲಾ ದಿನಗಳು. ಗಣರಾಜ್ಯದ ಹಿಂದಿನ ಎರಡು ಮೂರು ದಿನಗಳು ಯಾವುದೇ ತರಗತಿ ನಡೆಯುತ್ತಿರ ಲಿಲ್ಲ.…

3 mins ago

ಹಾಳೆ ಅಂಬುಲೆ ಉಯ್ಯಾಲೆ ಆಡಿ…

ನಾನು ಕೆಲಸ ಮಾಡುವ ಪಿರಿಯಾಪಟ್ಟಣದ ಶಾಲೆ ಮೈಸೂರು ಜಿಲ್ಲೆಯಲ್ಲೇ ವಿಶೇಷವಾದ ಶಾಲೆ. ಮೈಸೂರು ಜಿಲ್ಲೆಗೆ ಸೇರಿದ್ದರೂ ಕೊಡಗು ಜಿಲ್ಲೆಗೆ ಸಮೀಪ…

6 mins ago

ಗಣರಾಜ್ಯ ಎಂಬುದು ಹಲವು ಪ್ರಶ್ನೆಗಳ ಒಂದು ವಾಸ್ತವ

ಚಿಕ್ಕಂದಿನಲ್ಲಿ ನನಗೆ ಭಾರತ ಎಂದರೆ ತುಂಬಾ  ಸುಂದರವಾದ ಕನಸಿನ ದೇಶವಾಗಿತ್ತು. ಶಾಲೆಯಲ್ಲಿ ನಾವು ನೋಡಿದ ಗಣರಾಜ್ಯ ದಿನಾಚರಣೆ, ಧ್ವಜಾರೋಹಣ, ರಾಷ್ಟ್ರಗೀತೆ,…

10 mins ago

125 ಬೀದಿನಾಯಿಗಳ ಸ್ಥಳಾಂತರ: ಮಡಿಕೇರಿ ನಗರಸಭೆ ನಿರ್ಧಾರ

ಪುನೀತ್ ಮಡಿಕೇರಿ ಬೀದಿನಾಯಿಗಳ ಹಾವಳಿ ಮಿತಿಮೀರಿದ ಹಿನ್ನೆಲೆ; ೨ ಎಕರೆ ಪ್ರದೇಶದಲ್ಲಿ ಆಶ್ರಯ ತಾಣ ನಿರ್ಮಿಸಲು ಟೆಂಡರ್ ಮಡಿಕೇರಿ: ಬೇರೆಡೆಗೆ…

16 mins ago

ಅಂಗಡಿ ವ್ಯಾಪಾರಕ್ಕೆ ಅನುಮತಿ ಪಡೆದು ಬಾರ್ ಆರಂಭ!

ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…

23 mins ago