ರಾಜ್ಯ

ಸಿಎಂ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ : ಸಕ್ಕರೆ ಕಾರ್ಖಾನೆ ಮಾಲೀಕರು, ಸಚಿವರು ಭಾಗಿ

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಅವರ ಸಭೆ ಆರಂಭವಾಗಿದೆ. 38 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಆಡಳಿತ ಮಂಡಳಿಯ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಕಬ್ಬುಗೆ ಪ್ರತಿ ಟನ್ ಗೆ 3,500 ರೂಪಾಯಿ ಬೆಲೆ ನೀಡಬೇಕೆಂದು ಆಗ್ರಹಿಸಿ ರೈತರು ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಸಭೆ ನಡೆಸಲಾಗುತ್ತಿದೆ.

ಇದನ್ನೂ ಓದಿ:-ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್‌ಎಫ್‌ಓ ಮೇಲೆ ಹಲ್ಲೆ

ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌, ಸಚಿವ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪೂರ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಮುರುಗೇಶ್ ನಿರಾಣಿ, ರಾಜು ಅಸಿಫ್ ಸೇಟ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಪೈಕಿ ಹಲವರು ಸಕ್ಕರೆ ಕಾರ್ಖಾನೆಗಳ ಮಾಲೀಕರೂ ಕೂಡ ಆಗಿದ್ದಾರೆ. ಬಿಜೆಪಿಯ ಮಾಜಿ ಸಚಿವ ಮುರುಗೇಶ್ ನಿರಾಣಿ ಸಕ್ಕರೆ ಕಾರ್ಖಾನೆ ಮಾಲೀಕರೂ ಕೂಡ ಆಗಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕೂಡ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದಾರೆ.

ಕಬ್ಬುಗೆ ಪ್ರತಿ ಟನ್ʼಗೆ ಎಷ್ಟು ಬೆಲೆ ನೀಡಲು ಸಾಧ್ಯ ಎಂಬ ಬಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ನೇರವಾಗಿ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

3 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

6 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

6 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

6 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

6 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

6 hours ago