ಸಾಂದರ್ಭಿಕ ಚಿತ್ರ
ಬೆಂಗಳೂರು: ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಖಾಸಗಿ ರೆಸಾರ್ಟ್ಗಳಲ್ಲಿ ತಂಗುವ ಅತಿಥಿಗಳಿಗೆ ಹಂಚುವ ಸಫಾರಿ ವಾಹನಗಳ ಕುರಿತ ಮಾಹಿತಿ ಒದಗಿಸುವಂತೆ ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್(JLRL) ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಖಾಸಗಿ ರೆಸಾರ್ಟ್ ಅತಿಥಿಗಳಿಗೆ ಕ್ಯಾಂಟರ್ಗಳನ್ನು ಒದಗಿಸಲಾಗುತ್ತಿದೆ. ಅದರೆ, ಜೆಎಲ್ಆರ್ಎಲ್ ಅತಿಥಿ ಗೃಹಗಳಿಗೆ ಸೂಕ್ತವಾದ ಜೀಪ್ಗಳನ್ನು ಒದಗಿಸಲಾಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ರೆಸಾರ್ಟ್ಗಳ ಸಂಘ 2022ರಲ್ಲಿ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜರೀಯಾ ಮತ್ತು ಕೆ.ವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಸಫಾರಿ ವಾಹನ ಸೌಲಭ್ಯ ಒದಗಿಸುವುದು ಮತ್ತು ಇತರ ಸೌಲಭ್ಯಗಳ ಕುರಿತಂತೆ ಸರ್ಕಾರದೊಂದಿಗೆ ಖಾಸಗಿ ರೆಸಾರ್ಟ್ಗಳ ಸಂಘ ಒಪ್ಪಂದ ಮಾಡಿಕೊಂಡಿದೆ. ಆದರೆ, ಜೆಎಲ್ಆರ್ಎಲ್ ಒಪ್ಪಂದ ಉಲ್ಲಂಘಿಸುತ್ತಿದೆ. ನ್ಯಾಯಯುತ ಹಂಚಿಕೆ ಮತ್ತು ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ವಿಸ್ತರಿಸಲು ನಿರ್ದೇಶನ ನೀಡಬೇಕು ಎಂದು ನ್ಯಾಯಾಪೀಠ ತೀರ್ಮಾನಿಸಬೇಕು ಎಂದು ಅರ್ಜಿದಾರರ ವಕೀಲರು ಮನವಿ ಮಾಡಿದರು.
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…