ಸಾಂದರ್ಭಿಕ ಚಿತ್ರ
ಬೆಂಗಳೂರು: ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಖಾಸಗಿ ರೆಸಾರ್ಟ್ಗಳಲ್ಲಿ ತಂಗುವ ಅತಿಥಿಗಳಿಗೆ ಹಂಚುವ ಸಫಾರಿ ವಾಹನಗಳ ಕುರಿತ ಮಾಹಿತಿ ಒದಗಿಸುವಂತೆ ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್(JLRL) ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಖಾಸಗಿ ರೆಸಾರ್ಟ್ ಅತಿಥಿಗಳಿಗೆ ಕ್ಯಾಂಟರ್ಗಳನ್ನು ಒದಗಿಸಲಾಗುತ್ತಿದೆ. ಅದರೆ, ಜೆಎಲ್ಆರ್ಎಲ್ ಅತಿಥಿ ಗೃಹಗಳಿಗೆ ಸೂಕ್ತವಾದ ಜೀಪ್ಗಳನ್ನು ಒದಗಿಸಲಾಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ರೆಸಾರ್ಟ್ಗಳ ಸಂಘ 2022ರಲ್ಲಿ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜರೀಯಾ ಮತ್ತು ಕೆ.ವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಸಫಾರಿ ವಾಹನ ಸೌಲಭ್ಯ ಒದಗಿಸುವುದು ಮತ್ತು ಇತರ ಸೌಲಭ್ಯಗಳ ಕುರಿತಂತೆ ಸರ್ಕಾರದೊಂದಿಗೆ ಖಾಸಗಿ ರೆಸಾರ್ಟ್ಗಳ ಸಂಘ ಒಪ್ಪಂದ ಮಾಡಿಕೊಂಡಿದೆ. ಆದರೆ, ಜೆಎಲ್ಆರ್ಎಲ್ ಒಪ್ಪಂದ ಉಲ್ಲಂಘಿಸುತ್ತಿದೆ. ನ್ಯಾಯಯುತ ಹಂಚಿಕೆ ಮತ್ತು ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ವಿಸ್ತರಿಸಲು ನಿರ್ದೇಶನ ನೀಡಬೇಕು ಎಂದು ನ್ಯಾಯಾಪೀಠ ತೀರ್ಮಾನಿಸಬೇಕು ಎಂದು ಅರ್ಜಿದಾರರ ವಕೀಲರು ಮನವಿ ಮಾಡಿದರು.
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…