ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿ ಆದೇಶ ಮಾಡಿದೆ.
ಎ೫ ಅಮಿತ್ ದಿಗ್ವೇಕರ್, ಎ೧೭ ಕೆ.ಟಿ.ನವೀನ್ ಕುಮಾರ್, ಎ೭ ಹೆಚ್ ಎಲ್ ಸುರೇಶ್ ಗೆ ಜಾಮೀನು ನೀಡಿ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿಂದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಆರೋಪಿಗಳ ಪರವಾಗಿ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದ ಮಂಡಿಸಿ, ಕಳೆದ ೬ ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೆ ದೀರ್ಘ ಕಾಲ ಜೈಲಿನಲ್ಲಿಡುವಂತಿಲ್ಲ ಎಂಬ ತೀರ್ಪು ಇದೆ ಎಂದು ಹೇಳಿದರು. ವಾದ ಆಲಿಸಿದ ಬಳಿಕ ನ್ಯಾಯಪೀಠ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಎ೧೧ ಮೋಹನ್ ನಾಯಕ್ ಗೆ ಜಾಮೀನು ಮಂಜೂರು ಆಗಿತ್ತು.
೨೦೧೭ ಸೆಪ್ಟೆಂಬರ್ ೫ ರಂದು ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಅವರನ್ನ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ ೧೮ ಆರೋಪಿಗಳು ಬಂಧನಕ್ಕೊಳಗಾಗಿದ್ದು, ೧೨೦೦ ಪುರಾವೆ ಹಾಗೂ ೫೦೦ ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…