ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿ ಆದೇಶ ಮಾಡಿದೆ.
ಎ೫ ಅಮಿತ್ ದಿಗ್ವೇಕರ್, ಎ೧೭ ಕೆ.ಟಿ.ನವೀನ್ ಕುಮಾರ್, ಎ೭ ಹೆಚ್ ಎಲ್ ಸುರೇಶ್ ಗೆ ಜಾಮೀನು ನೀಡಿ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿಂದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಆರೋಪಿಗಳ ಪರವಾಗಿ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದ ಮಂಡಿಸಿ, ಕಳೆದ ೬ ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೆ ದೀರ್ಘ ಕಾಲ ಜೈಲಿನಲ್ಲಿಡುವಂತಿಲ್ಲ ಎಂಬ ತೀರ್ಪು ಇದೆ ಎಂದು ಹೇಳಿದರು. ವಾದ ಆಲಿಸಿದ ಬಳಿಕ ನ್ಯಾಯಪೀಠ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಎ೧೧ ಮೋಹನ್ ನಾಯಕ್ ಗೆ ಜಾಮೀನು ಮಂಜೂರು ಆಗಿತ್ತು.
೨೦೧೭ ಸೆಪ್ಟೆಂಬರ್ ೫ ರಂದು ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಅವರನ್ನ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ ೧೮ ಆರೋಪಿಗಳು ಬಂಧನಕ್ಕೊಳಗಾಗಿದ್ದು, ೧೨೦೦ ಪುರಾವೆ ಹಾಗೂ ೫೦೦ ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…