ರಾಜ್ಯ

ವೃದ್ಧ ತಾಯಿಯ ಜೀವನ ನಿರ್ವಹಣೆಗೆ ವಾರ್ಷಿಕ 14 ಲಕ್ಷ ಪಾವತಿಸಲು ಹೈಕೋರ್ಟ್‌ ಆದೇಶ

ಕೊಡಗಿನ ವಿರಾಜಪೇಟೆ ಮೂಲದ 85 ವರ್ಷದ ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಎಂಬುವವರ ಜೀವನ ನಿರ್ವಹಣೆಗೆ ಮಗ ಹಾಗೂ ಮೊಮ್ಮಗಳು ವಾರ್ಷಿಕ ತಲಾ 7 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಈ ವಿಷಯವಾಗಿ ವೃದ್ಧೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.

ಏನಿದು ಪ್ರಕರಣ?

ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಅವರು ವಿರಾಜಪೇಟೆಯಲ್ಲಿ ತಾವು ಹೊಂದಿದ್ದ 22 ಎಕರೆ ಕಾಫಿ ಎಸ್ಟೇಟ್‌ ಅನ್ನು 2016ರಲ್ಲಿ ಪುತ್ರ ಹಾಗೂ ಮೊಮ್ಮಗಳಿಗೆ ʼಗಿಫ್ಟ್‌ ಡೀಡ್‌ʼ ಅಡಿಯಲ್ಲಿ ಉಡುಗೊರೆಯನ್ನಾಗಿ ನೀಡಿದ್ದರು. ಈ ಸಂದರ್ಭದಲ್ಲಿ ಪುತ್ರ ಹಾಗೂ ಮೊಮ್ಮಗಳು ಅಪ್ಪರಂಡ ಶಾಂತಿ ಬೋಪಣ್ಣ ಅವರ ಜೀವನ ನಿರ್ವಹಣೆಗೆ ವಾರ್ಷಿಕವಾಗಿ ತಲಾ 7 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭರವಸೆಯನ್ನು ನೀಡಿದ್ದರು. ಅದರಂತೆ 2016ರಿಂದ 2019ರವರೆಗೆ ಇಬ್ಬರೂ ಸಹ ಹಣವನ್ನು ನೀಡಿದ್ದರು.

ಬಳಿಕ ಪುತ್ರ ಹಾಗೂ ಮೊಮ್ಮಗಳು ಯಾವುದೇ ಹಣ ನೀಡಿರಲಿಲ್ಲ. ಅಲ್ಲದೇ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿರುವ ವಿಷಯ ತಿಳಿದ ಅಪ್ಪರಂಡ ಶಾಂತಿ ಬೋಪಣ್ಣ 2019ರಲ್ಲಿ ಗಿಫ್ಟ್‌ ಡೀಡ್‌ ರದ್ದುಪಡಿಸುವಂತೆ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಾಯ್ದೆ 2007ʼರ ಅಡಿಯಲ್ಲಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು.

ಈ ಮನವಿಯ ವಿಚಾರಣೆ ನಡೆಸಿದ್ದ ಉಪವಿಭಾಗಾಧಿಕಾರಿ 2021ರ ಸೆಪ್ಟೆಂಬರ್‌ 15ರಂದು ಗಿಫ್ಟ್‌ ಡೀಡ್‌ ಅನ್ನು ರದ್ದುಮಾಡಿ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಪುತ್ರ ಹಾಗೂ ಮೊಮ್ಮಗಳು ಜಿಲ್ಲಾಧಿಕಾರಿಗೆ ಮೇಲ್ಮನವಿ ಸಲ್ಲಿಸಿದ್ದರು. 2023ರ ಮಾರ್ಚ್‌ 23ರಂದು ಉಪವಿಭಾಗಾಧಿಕಾರಿಯ ಆದೇಶವನ್ನು ರದ್ದುಗೊಳಿಸಿದ ಜಿಲ್ಲಾಧಿಕಾರಿ ಪುತ್ರ ಹಾಗೂ ಮೊಮ್ಮಗಳ ಆಸ್ತಿ ಹಕ್ಕನ್ನು ಮರುಸ್ಥಾಪಿಸುವಂತೆ ಆದೇಶ ಹೊರಡಿಸಿದ್ದರು. ಹಾಗೆಯೇ ವೃದ್ಧತಾಯಿಯ ಜೀವನಾಂಶವನ್ನು ಜೀವಿತಾವಧಿವರೆಗೆ ಪಾವತಿಸುವಂತೆ ಪುತ್ರ ಹಾಗೂ ಮೊಮ್ಮಗಳಿಗೆ ನಿರ್ದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿದ್ದ ವೃದ್ಧೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

andolana

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

1 hour ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

1 hour ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

1 hour ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

2 hours ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

2 hours ago