ರಾಜ್ಯ

ವೃದ್ಧ ತಾಯಿಯ ಜೀವನ ನಿರ್ವಹಣೆಗೆ ವಾರ್ಷಿಕ 14 ಲಕ್ಷ ಪಾವತಿಸಲು ಹೈಕೋರ್ಟ್‌ ಆದೇಶ

ಕೊಡಗಿನ ವಿರಾಜಪೇಟೆ ಮೂಲದ 85 ವರ್ಷದ ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಎಂಬುವವರ ಜೀವನ ನಿರ್ವಹಣೆಗೆ ಮಗ ಹಾಗೂ ಮೊಮ್ಮಗಳು ವಾರ್ಷಿಕ ತಲಾ 7 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಈ ವಿಷಯವಾಗಿ ವೃದ್ಧೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.

ಏನಿದು ಪ್ರಕರಣ?

ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಅವರು ವಿರಾಜಪೇಟೆಯಲ್ಲಿ ತಾವು ಹೊಂದಿದ್ದ 22 ಎಕರೆ ಕಾಫಿ ಎಸ್ಟೇಟ್‌ ಅನ್ನು 2016ರಲ್ಲಿ ಪುತ್ರ ಹಾಗೂ ಮೊಮ್ಮಗಳಿಗೆ ʼಗಿಫ್ಟ್‌ ಡೀಡ್‌ʼ ಅಡಿಯಲ್ಲಿ ಉಡುಗೊರೆಯನ್ನಾಗಿ ನೀಡಿದ್ದರು. ಈ ಸಂದರ್ಭದಲ್ಲಿ ಪುತ್ರ ಹಾಗೂ ಮೊಮ್ಮಗಳು ಅಪ್ಪರಂಡ ಶಾಂತಿ ಬೋಪಣ್ಣ ಅವರ ಜೀವನ ನಿರ್ವಹಣೆಗೆ ವಾರ್ಷಿಕವಾಗಿ ತಲಾ 7 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭರವಸೆಯನ್ನು ನೀಡಿದ್ದರು. ಅದರಂತೆ 2016ರಿಂದ 2019ರವರೆಗೆ ಇಬ್ಬರೂ ಸಹ ಹಣವನ್ನು ನೀಡಿದ್ದರು.

ಬಳಿಕ ಪುತ್ರ ಹಾಗೂ ಮೊಮ್ಮಗಳು ಯಾವುದೇ ಹಣ ನೀಡಿರಲಿಲ್ಲ. ಅಲ್ಲದೇ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿರುವ ವಿಷಯ ತಿಳಿದ ಅಪ್ಪರಂಡ ಶಾಂತಿ ಬೋಪಣ್ಣ 2019ರಲ್ಲಿ ಗಿಫ್ಟ್‌ ಡೀಡ್‌ ರದ್ದುಪಡಿಸುವಂತೆ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಾಯ್ದೆ 2007ʼರ ಅಡಿಯಲ್ಲಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು.

ಈ ಮನವಿಯ ವಿಚಾರಣೆ ನಡೆಸಿದ್ದ ಉಪವಿಭಾಗಾಧಿಕಾರಿ 2021ರ ಸೆಪ್ಟೆಂಬರ್‌ 15ರಂದು ಗಿಫ್ಟ್‌ ಡೀಡ್‌ ಅನ್ನು ರದ್ದುಮಾಡಿ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಪುತ್ರ ಹಾಗೂ ಮೊಮ್ಮಗಳು ಜಿಲ್ಲಾಧಿಕಾರಿಗೆ ಮೇಲ್ಮನವಿ ಸಲ್ಲಿಸಿದ್ದರು. 2023ರ ಮಾರ್ಚ್‌ 23ರಂದು ಉಪವಿಭಾಗಾಧಿಕಾರಿಯ ಆದೇಶವನ್ನು ರದ್ದುಗೊಳಿಸಿದ ಜಿಲ್ಲಾಧಿಕಾರಿ ಪುತ್ರ ಹಾಗೂ ಮೊಮ್ಮಗಳ ಆಸ್ತಿ ಹಕ್ಕನ್ನು ಮರುಸ್ಥಾಪಿಸುವಂತೆ ಆದೇಶ ಹೊರಡಿಸಿದ್ದರು. ಹಾಗೆಯೇ ವೃದ್ಧತಾಯಿಯ ಜೀವನಾಂಶವನ್ನು ಜೀವಿತಾವಧಿವರೆಗೆ ಪಾವತಿಸುವಂತೆ ಪುತ್ರ ಹಾಗೂ ಮೊಮ್ಮಗಳಿಗೆ ನಿರ್ದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿದ್ದ ವೃದ್ಧೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

andolana

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

9 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

10 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

11 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

11 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

12 hours ago