ರಾಜ್ಯ

ವೃದ್ಧ ತಾಯಿಯ ಜೀವನ ನಿರ್ವಹಣೆಗೆ ವಾರ್ಷಿಕ 14 ಲಕ್ಷ ಪಾವತಿಸಲು ಹೈಕೋರ್ಟ್‌ ಆದೇಶ

ಕೊಡಗಿನ ವಿರಾಜಪೇಟೆ ಮೂಲದ 85 ವರ್ಷದ ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಎಂಬುವವರ ಜೀವನ ನಿರ್ವಹಣೆಗೆ ಮಗ ಹಾಗೂ ಮೊಮ್ಮಗಳು ವಾರ್ಷಿಕ ತಲಾ 7 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಈ ವಿಷಯವಾಗಿ ವೃದ್ಧೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.

ಏನಿದು ಪ್ರಕರಣ?

ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಅವರು ವಿರಾಜಪೇಟೆಯಲ್ಲಿ ತಾವು ಹೊಂದಿದ್ದ 22 ಎಕರೆ ಕಾಫಿ ಎಸ್ಟೇಟ್‌ ಅನ್ನು 2016ರಲ್ಲಿ ಪುತ್ರ ಹಾಗೂ ಮೊಮ್ಮಗಳಿಗೆ ʼಗಿಫ್ಟ್‌ ಡೀಡ್‌ʼ ಅಡಿಯಲ್ಲಿ ಉಡುಗೊರೆಯನ್ನಾಗಿ ನೀಡಿದ್ದರು. ಈ ಸಂದರ್ಭದಲ್ಲಿ ಪುತ್ರ ಹಾಗೂ ಮೊಮ್ಮಗಳು ಅಪ್ಪರಂಡ ಶಾಂತಿ ಬೋಪಣ್ಣ ಅವರ ಜೀವನ ನಿರ್ವಹಣೆಗೆ ವಾರ್ಷಿಕವಾಗಿ ತಲಾ 7 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭರವಸೆಯನ್ನು ನೀಡಿದ್ದರು. ಅದರಂತೆ 2016ರಿಂದ 2019ರವರೆಗೆ ಇಬ್ಬರೂ ಸಹ ಹಣವನ್ನು ನೀಡಿದ್ದರು.

ಬಳಿಕ ಪುತ್ರ ಹಾಗೂ ಮೊಮ್ಮಗಳು ಯಾವುದೇ ಹಣ ನೀಡಿರಲಿಲ್ಲ. ಅಲ್ಲದೇ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿರುವ ವಿಷಯ ತಿಳಿದ ಅಪ್ಪರಂಡ ಶಾಂತಿ ಬೋಪಣ್ಣ 2019ರಲ್ಲಿ ಗಿಫ್ಟ್‌ ಡೀಡ್‌ ರದ್ದುಪಡಿಸುವಂತೆ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಾಯ್ದೆ 2007ʼರ ಅಡಿಯಲ್ಲಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು.

ಈ ಮನವಿಯ ವಿಚಾರಣೆ ನಡೆಸಿದ್ದ ಉಪವಿಭಾಗಾಧಿಕಾರಿ 2021ರ ಸೆಪ್ಟೆಂಬರ್‌ 15ರಂದು ಗಿಫ್ಟ್‌ ಡೀಡ್‌ ಅನ್ನು ರದ್ದುಮಾಡಿ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಪುತ್ರ ಹಾಗೂ ಮೊಮ್ಮಗಳು ಜಿಲ್ಲಾಧಿಕಾರಿಗೆ ಮೇಲ್ಮನವಿ ಸಲ್ಲಿಸಿದ್ದರು. 2023ರ ಮಾರ್ಚ್‌ 23ರಂದು ಉಪವಿಭಾಗಾಧಿಕಾರಿಯ ಆದೇಶವನ್ನು ರದ್ದುಗೊಳಿಸಿದ ಜಿಲ್ಲಾಧಿಕಾರಿ ಪುತ್ರ ಹಾಗೂ ಮೊಮ್ಮಗಳ ಆಸ್ತಿ ಹಕ್ಕನ್ನು ಮರುಸ್ಥಾಪಿಸುವಂತೆ ಆದೇಶ ಹೊರಡಿಸಿದ್ದರು. ಹಾಗೆಯೇ ವೃದ್ಧತಾಯಿಯ ಜೀವನಾಂಶವನ್ನು ಜೀವಿತಾವಧಿವರೆಗೆ ಪಾವತಿಸುವಂತೆ ಪುತ್ರ ಹಾಗೂ ಮೊಮ್ಮಗಳಿಗೆ ನಿರ್ದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿದ್ದ ವೃದ್ಧೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

3 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

3 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

4 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

13 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago