ರಾಜ್ಯ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಜಂಟಿ ಸುದ್ದಿಗೋಷ್ಠಿ ಮುಖ್ಯಾಂಶಗಳು

ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು.

ಆದರೆ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ ಎಂದರು. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

ಇದನ್ನು ಓದಿ: ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ: ಮಾಜಿ ಸಿಎಂ ಯಡಿಯೂರಪ್ಪ

ಉಪಹಾರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣುಗೋಪಾಲ್ ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಕರೆಯಲು ಸೂಚಿಸಿದ್ದರು. ಡಿ.ಕೆ.ಶಿವಕುಮಾರ್ ಅವರಿಗೂ ಇದನ್ನೇ ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನವಿತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆವು ಎಂದರು.

ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲ್ಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್.8ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಇವರಿಗೆ ಎದುರಿಸಿದ್ದೇವೆ ಮುಂದೆಯೂ ಎದುರಿಸುತ್ತೇವೆ. ಬಿಜೆಪಿ, ಜೆಡಿಎಸ್ ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದರು.

ಇತ್ತೀಚೆಗೆ ಅಧಿಕಾರ ಹಸ್ತಾಂತರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಬಿಜೆಪಿ, ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ. ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago