ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ರಾಘವೇಂದ್ರ, ರಾಜು, ಶಬ್ಬೀರ್ ಎಂದು ಗುರುತಿಸಲಾಗಿದೆ. ಘಟನೆ ಗುರುವಾರ ಸಂಜೆ ಸಂಭವಿಸಿದ್ದು, ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಮೃತದೇಹಗಳನ್ನು ರಕ್ಷಣಾ ತಂಡಗಳು ಪತ್ತೆ ಮಾಡಿವೆ. ಮೃತರಲ್ಲಿ ಒಬ್ಬರು ಕಾಮಗಾರಿ ಮೇಲ್ವಿಚಾರಕರೂ ಸೇರಿದ್ದಾರೆ.
ಘಟನೆಯಲ್ಲಿ ಇನ್ನೂ ನಾಲ್ಕು ಜನರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಸ್ಡಿಆರ್ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಪತ್ತೆ ಮಾಡಿ, ಶಿವಮೊಗ್ಗದ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಹುಲಿಕಲ್ ಘಾಟ್ ಪ್ರದೇಶವು ಗುಡ್ಡಗಾಡುಗಳ ನಡುವಿನ ಕುಂದಾಪುರ-ಶಿವಮೊಗ್ಗ ಹೆದ್ದಾರಿಯಲ್ಲಿದ್ದು, ಭೂಕುಸಿತಕ್ಕೆ ತುತ್ತಾಗುವ ಸಂಭಾವ್ಯ ಪ್ರದೇಶವಾಗಿದೆ. ಕಾಮಗಾರಿ ವೇಳೆ ದಿಢೀರ್ ಗುಡ್ಡ ಕುಸಿತ ಸಂಭವಿಸಿದ್ದು, ಏಳು ಜನರು ಮಣ್ಣಿನಡಿ ಸಿಲುಕಿದ್ದರಲ್ಲಿ ನಾಲ್ಕು ಜನರನ್ನು ರಕ್ಷಿಸಲಾಗಿದೆ.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…