ರಾಜ್ಯ

ಭೀಕರ ಪ್ರವಾಹಕ್ಕೆ ತುತ್ತಾದ ಹಿಮಾಚಲ ಪ್ರದೇಶ: ರಾಜ್ಯ ಸರ್ಕಾರದಿಂದ 5 ಕೋಟಿ ನೆರವು

ಬೆಂಗಳೂರು: ಭಾರೀ ಮಳೆಗೆ ಹಿಮಾಚಲ ಪ್ರದೇಶ ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ರಾಜ್ಯ ಸರ್ಕಾರದಿಂದ 5 ಕೋಟಿ ನೆರವು ನೀಡುವುದಾಗಿ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್‌ ಸಿಂಗ್‌ ಸುಖು ಅವರಿಗೆ ಪತ್ರ ಬರೆದಿದ್ದಾರೆ. ಹಿಮಾಚಲ ಪ್ರದೇಶದ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ. ಸಾವಿರಾರು ಮನೆಗಳು ಕೊಚ್ಚಿಹೋಗಿವೆ. ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ.

ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಇದನ್ನು ಎದುರಿಸಬೇಕು. ಹೀಗಾಗಿ ಕರ್ನಾಟಕವು ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿಗಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ನವರಾತ್ರಿಗೆ ಒಂದು ದಿನ ಮೊದಲು ಜಿಎಸ್‌ಟಿ ಕಡಿತ: ಪ್ರಧಾನಿ ನರೇಂದ್ರ ಮೋದಿ

ಈ ಹಿನ್ನೆಲೆಯಲ್ಲಿ ವಿಪತ್ತಿಗೀಡಾದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ ಹಣವನ್ನು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇನ್ನು ಹಿಮಾಚಲ ಪ್ರದೇಶಕ್ಕೆ 5 ಕೋಟಿ ನೆರವು ನೀಡುವ ಬಗ್ಗೆ ಸರ್ಕಾರ ಹೇಳಿರುವ ಹಿನ್ನೆಲೆಯಲ್ಲಿ ವಿಪಕ್ಷಗಳು ಕಿಡಿಕಾರಿವೆ. ಈ ಬಗ್ಗೆ ಮಾತನಾಡಿರುವ ಶಾಸಕ ಅಶ್ವಥ್‌ ನಾರಾಯಣ್‌ ಅವರು, ಹಾಸನದಲ್ಲಿ ಗಣೇಶನ ಮೆರವಣಿಗೆಯಲ್ಲಿ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ ರಸ್ತೆಗಳು ಸುರಕ್ಷತೆ ಇಲ್ಲ. ಮೆರವಣಿಗೆ ನಡೆಯುವಾಗ ಹೇಗೆ ಅಷ್ಟು ವೇಗವಾಗಿ ಚಾಲಕ ವಾಹನ ಚಲಾಯಿಸುತ್ತಿದ್ದ. ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು. ವಯನಾಡಿನವರು, ಹಿಮಾಚಲ ಪ್ರದೇಶದವರು ಎಂದುಕೊಂಡು ಹಾಸನದವರಿಗೂ ಹೆಚ್ಚಿನ ಪರಿಹಾರ ನೀಡಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

15 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

16 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

16 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

22 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

22 hours ago