ರಾಜ್ಯ

ಭೀಕರ ಪ್ರವಾಹಕ್ಕೆ ತುತ್ತಾದ ಹಿಮಾಚಲ ಪ್ರದೇಶ: ರಾಜ್ಯ ಸರ್ಕಾರದಿಂದ 5 ಕೋಟಿ ನೆರವು

ಬೆಂಗಳೂರು: ಭಾರೀ ಮಳೆಗೆ ಹಿಮಾಚಲ ಪ್ರದೇಶ ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ರಾಜ್ಯ ಸರ್ಕಾರದಿಂದ 5 ಕೋಟಿ ನೆರವು ನೀಡುವುದಾಗಿ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್‌ ಸಿಂಗ್‌ ಸುಖು ಅವರಿಗೆ ಪತ್ರ ಬರೆದಿದ್ದಾರೆ. ಹಿಮಾಚಲ ಪ್ರದೇಶದ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ. ಸಾವಿರಾರು ಮನೆಗಳು ಕೊಚ್ಚಿಹೋಗಿವೆ. ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ.

ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಇದನ್ನು ಎದುರಿಸಬೇಕು. ಹೀಗಾಗಿ ಕರ್ನಾಟಕವು ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿಗಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ನವರಾತ್ರಿಗೆ ಒಂದು ದಿನ ಮೊದಲು ಜಿಎಸ್‌ಟಿ ಕಡಿತ: ಪ್ರಧಾನಿ ನರೇಂದ್ರ ಮೋದಿ

ಈ ಹಿನ್ನೆಲೆಯಲ್ಲಿ ವಿಪತ್ತಿಗೀಡಾದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ ಹಣವನ್ನು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇನ್ನು ಹಿಮಾಚಲ ಪ್ರದೇಶಕ್ಕೆ 5 ಕೋಟಿ ನೆರವು ನೀಡುವ ಬಗ್ಗೆ ಸರ್ಕಾರ ಹೇಳಿರುವ ಹಿನ್ನೆಲೆಯಲ್ಲಿ ವಿಪಕ್ಷಗಳು ಕಿಡಿಕಾರಿವೆ. ಈ ಬಗ್ಗೆ ಮಾತನಾಡಿರುವ ಶಾಸಕ ಅಶ್ವಥ್‌ ನಾರಾಯಣ್‌ ಅವರು, ಹಾಸನದಲ್ಲಿ ಗಣೇಶನ ಮೆರವಣಿಗೆಯಲ್ಲಿ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ ರಸ್ತೆಗಳು ಸುರಕ್ಷತೆ ಇಲ್ಲ. ಮೆರವಣಿಗೆ ನಡೆಯುವಾಗ ಹೇಗೆ ಅಷ್ಟು ವೇಗವಾಗಿ ಚಾಲಕ ವಾಹನ ಚಲಾಯಿಸುತ್ತಿದ್ದ. ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು. ವಯನಾಡಿನವರು, ಹಿಮಾಚಲ ಪ್ರದೇಶದವರು ಎಂದುಕೊಂಡು ಹಾಸನದವರಿಗೂ ಹೆಚ್ಚಿನ ಪರಿಹಾರ ನೀಡಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago