ರಾಜ್ಯ

ಹಿಂದೂ ಅನ್ನೋದು ಅವಮಾನಕರ ಶಬ್ಧ: ಪ್ರೊ.ಕೆ.ಎಸ್.ಭಗವಾನ್‌ ವಿವಾದಾತ್ಮಕ ಹೇಳಿಕೆ

ರಾಯಚೂರು: ಹಿಂದೂ ಅನ್ನೋದು ಅವಮಾನಕರ ಶಬ್ಧ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಎಂದು ಚಿಂತಕ ಪ್ರೊ.ಕೆ.ಎಸ್.ಭಗವಾನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪದೇ ಪದೇ ಹಿಂದುಗಳ ವಿರುದ್ಧ ಮಾತನಾಡಿ ಆಕ್ರೋಶಕ್ಕೆ ಗುರಿಯಾಗುತ್ತಿರುವ ಪ್ರೊ.ಕೆ.ಎಸ್.ಭಗವಾನ್‌ ಅವರು, ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಹಿಂದು ಪದದ ಬಗ್ಗೆ ಮಾತನಾಡಿದ ಅವರು, ಹಿಂದೂ ಶಬ್ಧ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್‌ ಲೇಖಕ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂದೂ ನದಿಯನ್ನು ಹಿಂದೂ ಎಂದು ಕರೆದರು.

ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಎನ್ನುವ ಹೆಸರಿಲ್ಲ ಎಂದರು.

ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೋ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಅಂತ ಇದೆ. ಹಾಗಾಗಿ ಹಿಂದೂ ಎನ್ನುವ ಶಬ್ಧ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ.

ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿದೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಎನ್ನುವ ಭಾವನೆಗೆ ಅಡ್ಡಿ ಬರುತ್ತಿದೆ ಎಂದು ಹಿಂದು ಎಂಬ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಿಂದುಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

10 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

10 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

10 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

10 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago