ರಾಯಚೂರು: ಹಿಂದೂ ಅನ್ನೋದು ಅವಮಾನಕರ ಶಬ್ಧ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಎಂದು ಚಿಂತಕ ಪ್ರೊ.ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪದೇ ಪದೇ ಹಿಂದುಗಳ ವಿರುದ್ಧ ಮಾತನಾಡಿ ಆಕ್ರೋಶಕ್ಕೆ ಗುರಿಯಾಗುತ್ತಿರುವ ಪ್ರೊ.ಕೆ.ಎಸ್.ಭಗವಾನ್ ಅವರು, ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಣಿ ಬ್ರಿಡ್ಜ್ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಹಿಂದು ಪದದ ಬಗ್ಗೆ ಮಾತನಾಡಿದ ಅವರು, ಹಿಂದೂ ಶಬ್ಧ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂದೂ ನದಿಯನ್ನು ಹಿಂದೂ ಎಂದು ಕರೆದರು.
ಮುಂದೆ ಅಕ್ಬರ್ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಎನ್ನುವ ಹೆಸರಿಲ್ಲ ಎಂದರು.
ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೋ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಅಂತ ಇದೆ. ಹಾಗಾಗಿ ಹಿಂದೂ ಎನ್ನುವ ಶಬ್ಧ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ.
ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿದೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಎನ್ನುವ ಭಾವನೆಗೆ ಅಡ್ಡಿ ಬರುತ್ತಿದೆ ಎಂದು ಹಿಂದು ಎಂಬ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಿಂದುಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…